Police Roundup

Day: April 15, 2026

ಧರ್ಮದ ಹಂಗಿಲ್ಲದ ದೈವ ಭಕ್ತಿ: ಬೆಟ್ಟದಾಸನಪುರದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಜಾತ್ರಾ ಮಹೋತ್ಸವ

ಆನೇಕಲ್: ತಾಲೂಕಿನ ಬೆಟ್ಟದಾಸನಪುರ ಗ್ರಾಮವು ಮತ್ತೊಮ್ಮೆ ಸಾಂಪ್ರದಾಯಿಕ ಸಾಮರಸ್ಯಕ್ಕೆ ಸಾಕ್ಷಿಯಾಗಿದೆ. ಇಲ್ಲಿನ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಒಗ್ಗೂಡಿ ಆಚರಿಸುವ ಮೂಲಕ ಭಾವೈಕ್ಯತೆಯ ಹಬ್ಬವಾಗಿ ವೈಭವದಿಂದ ಜರುಗಿತು.   ಈ ಜಾತ್ರೆಯ ವಿಶೇಷವೆಂದರೆ, ಗ್ರಾಮದ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವವನ್ನು ಮುಸ್ಲಿಂ ಸಮುದಾಯದ ಬಾಂಧವರು ಭಕ್ತಿಯಿಂದ ಆಯೋಜಿಸುವುದು. ಗ್ರಾಮದ ಎಲ್ಲಾ ಮುಸ್ಲಿಮರು ಒಗ್ಗೂಡಿ ಪಲ್ಲಕ್ಕಿ ಉತ್ಸವವನ್ನು ನಡೆಸಿ, ದೇವರಿಗೆ ಗೌರವ ಸಲ್ಲಿಸುವ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು….

Read More

ಅಂಬೇಡ್ಕರ್ ಜಯಂತಿ ಸಂಭ್ರಮದಲ್ಲಿ ಸೂತಕ: ಜನರ ಗುಂಪಿಗೆ ನುಗ್ಗಿದ ಕಾರು – 7 ವರ್ಷದ ಬಾಲಕಿ ಸಾವು, 9 ಮಂದಿಗೆ ಗಾಯ

ಚಿಕ್ಕಮಗಳೂರು: ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.   ​ಸಂಭ್ರಮದ ನಡುವೆ ಸುನಾಮಿಯಂತೆ ಬಂದ ಕಾರು: ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಮಂಗಳವಾರ ಅಂಬೇಡ್ಕರ್ ಜಯಂತಿ ಪ್ರಯುಕ್ತ ಅದ್ದೂರಿ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಅತಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಮೆರವಣಿಗೆಯಲ್ಲಿದ್ದ ಜನರ ಗುಂಪಿಗೆ…

Read More

Solverwp- WordPress Theme and Plugin