ಸಾಗರ: ಮನೆಯ ಮುಂದೆ ಆಟವಾಡುತ್ತಿದ್ದ ಪುಟ್ಟ ಕಂದನಿಗೆ ಹಾವು ಕಚ್ಚಿ, ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿರುವ ಅತ್ಯಂತ ಹೃದಯವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಶಿವಮೊಗ್ಗದ ಎಸ್.ಎಸ್. ನಗರದ ನಿವಾಸಿಗಳಾದ ಅಕ್ಷತಾ ಮತ್ತು ಗಣೇಶ್ ದಂಪತಿಯ ಎರಡು ವರ್ಷದ ಪುತ್ರ ಭವಿನ್ ಮೃತಪಟ್ಟ ದುರ್ದೈವಿ. ಅಕ್ಷತಾ ಅವರು ಮಗುವಿನೊಂದಿಗೆ ಸಾಗರದಲ್ಲಿರುವ ತಮ್ಮ ತವರು ಮನೆಗೆ ಬಂದಿದ್ದರು. ಇಂದು ಮನೆಯ ಮುಂಭಾಗದಲ್ಲಿ ಮಗು ಆಟವಾಡುತ್ತಿದ್ದ ಸಂದರ್ಭದಲ್ಲಿ ವಿಷಪೂರಿತ ಹಾವು ಕಚ್ಚಿದೆ. ಮಗುವಿನ ಚೀರಾಟ ಕೇಳಿ ಪೋಷಕರು…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (CET) ಸಜ್ಜಾಗುತ್ತಿರುವ ವಿದ್ಯಾರ್ಥಿಗಳಿಗೆ ಸೈಬರ್ ಕಿರಾತಕರು ಗಾಳ ಹಾಕಿದ್ದಾರೆ. ಪ್ರವೇಶ ಪತ್ರ (Hall Ticket) ಡೌನ್ಲೋಡ್ ಮಾಡುವ ನೆಪದಲ್ಲಿ ನಕಲಿ ವೆಬ್ಸೈಟ್ಗಳನ್ನು ಸೃಷ್ಟಿಸಿ ವಿದ್ಯಾರ್ಥಿಗಳ ವೈಯಕ್ತಿಕ ಮಾಹಿತಿ ಕದಿಯುವ ಜಾಲ ಸಕ್ರಿಯವಾಗಿದ್ದು, ಈ ಬಗ್ಗೆ ಪ್ರಾಧಿಕಾರವು ಅಧಿಕೃತ ಎಚ್ಚರಿಕೆ ನೀಡಿದೆ. ಇದೇ ಏಪ್ರಿಲ್ 23 ಮತ್ತು 24ರಂದು ರಾಜ್ಯಾದ್ಯಂತ ಸಿಇಟಿ ಪರೀಕ್ಷೆಗಳು ನಡೆಯಲಿವೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ವಂಚಕರು, “https://applytocollege.co/kcet_admit_card_2026” ಎಂಬ ನಕಲಿ…