ಬೆಂಗಳೂರು: ರಾಮಾಯಣದ ಪಾತ್ರಗಳ ಬಗ್ಗೆ ವಿವಾದಾತ್ಮಕ ಮತ್ತು ಹಗುರವಾಗಿ ಮಾತನಾಡಿದ ಆರೋಪದ ಹಿನ್ನೆಲೆಯಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ವಿರುದ್ಧ ಬೆಂಗಳೂರಿನಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿದೆ. ಘಟನೆಯ ಹಿನ್ನೆಲೆ: ಇತ್ತೀಚೆಗೆ ಕೇರಳದಲ್ಲಿ ನಡೆದ ಸಾಹಿತ್ಯ ಉತ್ಸವವೊಂದರಲ್ಲಿ ಭಾಗವಹಿಸಿದ್ದ ಪ್ರಕಾಶ್ ರಾಜ್, ಹಿಂದಿ ಮತ್ತು ಪ್ರಾದೇಶಿಕ ಭಾಷೆಗಳ ನಡುವಿನ ಸಂಘರ್ಷದ ಕುರಿತು ಮಾತನಾಡುತ್ತಿದ್ದರು. ಈ ವೇಳೆ ರಾಮಾಯಣದ ಪ್ರಸಂಗಗಳನ್ನು ಉಲ್ಲೇಖಿಸಿದ ಅವರು, “ರಾಮ ಉತ್ತರ ಭಾರತದವನು, ರಾವಣ ಬುಡಕಟ್ಟು ಜನಾಂಗಕ್ಕೆ ಸೇರಿದವನು. ದಕ್ಷಿಣ ಭಾರತಕ್ಕೆ ಬಂದಾಗ ಲಕ್ಷ್ಮಣನಿಗೆ…
ಬೆಂಗಳೂರು: ರಾಜ್ಯದಲ್ಲಿ ಈ ವರ್ಷದ ಮೊದಲ ಹಕ್ಕಿ ಜ್ವರ (H5N1) ಪ್ರಕರಣ ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು ಹೊರವಲಯದ ಹೆಸರಘಟ್ಟ ವ್ಯಾಪ್ತಿಯ ಮುತ್ತೂರು ಗ್ರಾಮದ ಪೌಲ್ಟ್ರಿ ಫಾರಂ ಒಂದರಲ್ಲಿ ವೈರಸ್ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸಾವಿರಾರು ಕೋಳಿಗಳನ್ನು ವೈಜ್ಞಾನಿಕವಾಗಿ ನಾಶಪಡಿಸಲಾಗಿದೆ. ಹೆಸರಘಟ್ಟದ ಪೌಲ್ಟ್ರಿ ಫಾರಂನಲ್ಲಿ ಏಪ್ರಿಲ್ 14 ರಂದು ನಡೆಸಿದ ಪ್ರಾಥಮಿಕ ತಪಾಸಣೆಯಲ್ಲೇ ಕೋಳಿಗಳಿಗೆ ಹಕ್ಕಿ ಜ್ವರ ಇರುವುದು ದೃಢಪಟ್ಟಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಶುಸಂಗೋಪನಾ ಇಲಾಖೆ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು, ಏಪ್ರಿಲ್ 16 ರಂದು…