ವಿಶ್ವಪ್ರಸಿದ್ಧ ಮುರ್ಡೇಶ್ವರ ದೇವಸ್ಥಾನದಲ್ಲಿ ಭಕ್ತರ ಸೋಗಿನಲ್ಲಿ ಬಂದು ಮಹಿಳೆಯ ಸರಗಳ್ಳತನ ಮಾಡಿದ್ದ ಅಂತರ ಜಿಲ್ಲಾ ಮಹಿಳಾ ಆರೋಪಿಯನ್ನು ಮುರ್ಡೇಶ್ವರ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತಳಿಂದ ಅಂದಾಜು 3,28,000 ರೂ. ಮೌಲ್ಯದ ಬಂಗಾರದ ಗಟ್ಟಿಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದ ಕಣ್ಣೂರು ಮೂಲದ ಜೈಯಂತ ಎ.ವಿ. ವೇಣುಗೋಪಾಲ ಎಂಬುವವರು ಏಪ್ರಿಲ್ 24ರಂದು ತಮ್ಮ ಕುಟುಂಬದೊಂದಿಗೆ ಮುರ್ಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಆವರಣದ ಜನಸಂದಣಿಯ ಲಾಭ ಪಡೆದ ಕಿಡಿಗೇಡಿಗಳು, ಜೈಯಂತ…
ಮೊಬೈಲ್ ಕಳೆದುಕೊಂಡು ಆತಂಕದಲ್ಲಿದ್ದ ಸಾರ್ವಜನಿಕರ ಮೊಗದಲ್ಲಿ ಚಿಕ್ಕೋಡಿ ಪೊಲೀಸರು ನಗು ಮೂಡಿಸಿದ್ದಾರೆ. ಸಿ.ಇ.ಐ.ಆರ್ (CEIR) ಪೋರ್ಟಲ್ ಸಹಾಯದಿಂದ ಪತ್ತೆ ಹಚ್ಚಲಾದ ಸುಮಾರು 36 ಮೊಬೈಲ್ ಫೋನ್ಗಳನ್ನು ಪೊಲೀಸರು ಇಂದು ವಾರಸುದಾರರಿಗೆ ಮರಳಿಸಿದ್ದಾರೆ. ವಿವಿಧ ಸಂದರ್ಭಗಳಲ್ಲಿ ಕಳೆದುಹೋಗಿದ್ದ ಹಾಗೂ ಕಳವಾಗಿದ್ದ ಮೊಬೈಲ್ ಫೋನ್ಗಳ ಬಗ್ಗೆ ಸಾರ್ವಜನಿಕರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರುಗಳನ್ನು ಆಧರಿಸಿ ತನಿಖೆ ಕೈಗೊಂಡ ಪೊಲೀಸರು, ಕೇಂದ್ರ ಸರ್ಕಾರದ CEIR (Central Equipment Identity Register) ಪೋರ್ಟಲ್ನಲ್ಲಿ ಮೊಬೈಲ್ ಮಾಹಿತಿ ದಾಖಲಿಸಿ…