ಕೊಡಗು ಜಿಲ್ಲೆಯಲ್ಲಿ ಪ್ರವಾಸಿಗರಿಗೆ ವಸತಿ ಸೌಲಭ್ಯ ಕಲ್ಪಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಸಾಕಷ್ಟು ಕಾಲಾವಕಾಶ ನೀಡಿದರೂ ಹಲವು ಹೋಂ-ಸ್ಟೇಗಳು ಇನ್ನು ನೋಂದಣಿಯಾಗದಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಅಧಿನಿಯಮ-2015ರ ಅಡಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆ ನಡೆಸುವ ಪ್ರತಿಯೊಬ್ಬರೂ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಕೂಡಲೇ ತಮ್ಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕು ಎಂದು ಸೂಚಿಸಲಾಗಿದೆ. ಈಗಾಗಲೇ ನಿಯಮ…
ಹೆಚ್ಚುತ್ತಿರುವ ಎಲ್ಪಿಜಿ ಸಿಲಿಂಡರ್ ಬೆಲೆ ಮತ್ತು ಇಂಧನದ ಮೇಲಿನ ಅವಲಂಬನೆಯನ್ನು ತಗ್ಗಿಸಲು ‘ಗೋಬರ್ಧನ್’ ಘಟಕಗಳು ರಾಮಬಾಣವಾಗಿ ಪರಿಣಮಿಸಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಮಠದಲ್ಲಿ ಸ್ಥಾಪಿಸಲಾದ 40 ಕ್ಯೂಬಿಕ್ ಮೀಟರ್ ಸಾಮರ್ಥ್ಯದ ಗೋಬರ್ಧನ್ ಘಟಕವು ಈಗ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಸ್ವರ್ಣವಲ್ಲಿ ಮಠದ ಗೋಶಾಲೆಯಲ್ಲಿ 80ಕ್ಕೂ ಅಧಿಕ ಗೋವುಗಳಿದ್ದು, ಪ್ರತಿದಿನ 400 ಕೆ.ಜಿಗೂ ಹೆಚ್ಚು ಸಗಣಿ ಸಂಗ್ರಹವಾಗುತ್ತದೆ. ಈ ಮೊದಲು ಮಠದ ಅನ್ನದಾಸೋಹ ಹಾಗೂ ಪಾಠಶಾಲೆಯ ವಿದ್ಯಾರ್ಥಿಗಳ ಅಡುಗೆಗಾಗಿ ವಾರ್ಷಿಕವಾಗಿ…