ದೊಡ್ಡಬಳ್ಳಾಪುರ: “ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ಮತ್ತು ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ (ESIC) ಆಸ್ಪತ್ರೆಗಳು ವರದಾನವಾಗಲಿವೆ,” ಎಂದು ಕೇಂದ್ರ ಕಾರ್ಮಿಕ, ಉದ್ಯೋಗ ಹಾಗೂ ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವೀಯ ಅವರು ಹೇಳಿದರು. ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸುಮಾರು ₹101 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 100 ಹಾಸಿಗೆಗಳ ಸಾಮರ್ಥ್ಯದ ಇಎಸ್ಐಸಿ ಆಸ್ಪತ್ರೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, “ಕಾರ್ಮಿಕರ ಘನತೆ ಮತ್ತು…
ಪಿರಿಯಾಪಟ್ಟಣ: ಕ್ರಿಕೆಟ್ ಆಡುತ್ತಿದ್ದ ವೇಳೆ ವಿದ್ಯುತ್ ಕೇಬಲ್ ತಗುಲಿ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ತಾಲೂಕಿನ ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟಿಎಂ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಧನಂಜಯ (12) ಮೃತಪಟ್ಟ ದುರದೃಷ್ಟಕರ ಬಾಲಕ. ಈತ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ರಜೆಯ ದಿನವಾದ್ದರಿಂದ ತನ್ನ ಸ್ನೇಹಿತರೊಂದಿಗೆ ಗ್ರಾಮದ ಬಯಲು ಪ್ರದೇಶದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಆಟದ ಮಧ್ಯೆ ಕ್ರಿಕೆಟ್ ಬಾಲ್ ಹಾರಿ ಹೋಗಿ ಸಮೀಪದಲ್ಲಿದ್ದ ವಿದ್ಯುತ್ ತಂತಿಗಳ ಮೇಲೆ…