ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ಅಕ್ರಮ ಸಂಬಂಧವೊಂದು ಕೊಲೆಯಲ್ಲಿ ಅಂತ್ಯವಾದ ಭೀಕರ ಘಟನೆ ನಡೆದಿದೆ. ಲೈಂಗಿಕ ಸಂಪರ್ಕಕ್ಕೆ ಒಪ್ಪದ ಕಾರಣಕ್ಕೆ ಆರೋಪಿಯೊಬ್ಬ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತ ಮಹಿಳೆಯನ್ನು ರಮ್ಯಾ.ಎ.ಆರ್. (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಜೆ.ಪಿ.ನಗರದಲ್ಲಿ ಹೋಂ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ರಮ್ಯಾ, ಕಳೆದ ಏಪ್ರಿಲ್ 28ರಂದು ತಮ್ಮ ಅತ್ತೆ ಕಾಳಮ್ಮನವರ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಸ್ವಗ್ರಾಮ ಅತ್ತಿಹಳ್ಳಿಗೆ ಬಂದಿದ್ದರು….
ಬೆಂಗಳೂರು: ದಂಪತಿಗಳ ನಡುವಿನ ಕ್ಷುಲ್ಲಕ ಜಗಳ ತಾರಕಕ್ಕೇರಿ, ಹೆತ್ತ ತಾಯಿಯೇ ತನ್ನ ಮಗುವನ್ನು ಹಣಕ್ಕಾಗಿ ಮಾರಾಟ ಮಾಡಿರುವ ಮನಕಲಕುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮಗುವನ್ನು ಮಾರಾಟ ಮಾಡಿದ ದೀಪಿಕಾ ಎಂಬಾಕೆ ತನ್ನ ಇಬ್ಬರು ಮಕ್ಕಳನ್ನು ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಅನಾಥವಾಗಿ ಬಿಟ್ಟು ಕ್ರೌರ್ಯ ಮೆರೆದಿದ್ದಾಳೆ. ರವಿ ಬಾಬು ಹಾಗೂ ದೀಪಿಕಾ ದಂಪತಿಗಳು ಕಳೆದ 16 ವರ್ಷಗಳಿಂದ ಸಂಸಾರ ನಡೆಸುತ್ತಿದ್ದರು. ಇತ್ತೀಚೆಗೆ ದಂಪತಿಗಳ ನಡುವೆ ಜಗಳವಾಗಿದ್ದು, ಗಂಡನ ಮೇಲಿನ ಕೋಪದಿಂದ ದೀಪಿಕಾ ತನ್ನ ಮೂವರು ಮಕ್ಕಳೊಂದಿಗೆ…