ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಸುಕಿನ ಜಾವ ಭೀಕರ ದುರಂತವೊಂದು ಸಂಭವಿಸಿದೆ. ಕೆಲವು ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ಸಂಪೂರ್ಣವಾಗಿ ನೆನೆದಿದ್ದ ಹಳೆಯ ಮನೆಯೊಂದರ ಮೇಲ್ಚಾವಣಿ (ಛಾವಣಿ) ಏಕಾಏಕಿ ಕುಸಿದು ಬಿದ್ದ ಪರಿಣಾಮ, ಮನೆಯೊಳಗೆ ಮಲಗಿದ್ದ ಮಹಿಳೆಯೊಬ್ಬರು ಅವಶೇಷಗಳಡಿ ಸಿಲುಕಿ ಜೀವಂತ ಸಮಾಧಿಯಾಗಿದ್ದಾರೆ. ನಿಡಗುಂದಿ ಪಟ್ಟಣದ ಗೌರೀಶ್ವರ ದೇವಸ್ಥಾನದ ಸಮೀಪ ಈ ಕರುಣಾಜನಕ ಘಟನೆ ನಡೆದಿದ್ದು, ಮಹಾದೇವಿ ವಾರದ (55) ಕೊನೆಯುಸಿರೆಳೆದ ದುರ್ದೈವಿಯಾಗಿದ್ದಾರೆ. ಸ್ಥಳೀಯರ ಮಾಹಿತಿ ಪ್ರಕಾರ, ನಿಡಗುಂದಿ ಪಟ್ಟಣದಲ್ಲಿ ಮೊನ್ನೆ ಸುರಿದಿದ್ದ ಮಳೆಗೆ ಈ…
ರಾಜಧಾನಿಯ ಜೆ.ಪಿ. ನಗರದ ಬೆಸ್ಕಾಂ (BESCOM) ಕಚೇರಿಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (AEE) ಮನೋಜ್ ಕುಮಾರ್ ಹಾಗೂ ವಿದ್ಯುತ್ ಗುತ್ತಿಗೆದಾರ ಕಂಠರಾಜು ಅವರು 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಜಾಣ್ಮೆಯ ಟ್ರ್ಯಾಪ್ಗೆ ಸಿಕ್ಕಿಬಿದ್ದಿದ್ದಾರೆ. ದೂರುದಾರರಾದ ರಘುರಾಜ್ ಎಂಬುವವರು ತಾತ್ಕಾಲಿಕವಾಗಿ ಮೀಟರ್ಗೆ 25 ಕಿಲೋ ವ್ಯಾಟ್ ವಿದ್ಯುತ್ ಪೂರೈಕೆ (Power Supply) ಮಂಜೂರು ಮಾಡುವಂತೆ ಜೆ.ಪಿ. ನಗರದ ಬೆಸ್ಕಾಂ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಕೆಲಸ ಮಾಡಿಕೊಡಲು ಬೆಸ್ಕಾಂ ಎಇಇ…