Police Roundup

Day: June 7, 2026

ಆಡಳಿತಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ: ಸರ್ಕಾರಿ ನೌಕರರು ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ!

ಬೆಂಗಳೂರು: ರಾಜ್ಯದ ಆಡಳಿತ ಸುಧಾರಣೆಗೆ ಮುಂದಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರಿ ವ್ಯವಸ್ಥೆಗೆ ಭರ್ಜರಿ ಚುರುಕು ಮುಟ್ಟಿಸಿದ್ದಾರೆ. ಮಹತ್ವದ ಸಭೆ ನಡೆಸಿ, ಭ್ರಷ್ಟಾಚಾರರಹಿತ ಹಾಗೂ ಪಾರದರ್ಶಕ ಆಡಳಿತಕ್ಕೆ ಖಡಕ್ ಸೂಚನೆ ನೀಡಿದ್ದ ಸಿಎಂ, ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರಿ ನೌಕರರ ಹಾಜರಾತಿಗೆ ಸಂಬಂಧಿಸಿದಂತೆ ಅತ್ಯಂತ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಇನ್ಮುಂದೆ ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ಪ್ರತಿದಿನ ಬೆಳಿಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕಿದೆ.   ಮುಖ್ಯಮಂತ್ರಿಗಳ ಕಟ್ಟುನಿಟ್ಟಿನ ನಿರ್ದೇಶನದ…

Read More

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ: ಹುಣಸೂರಿನಲ್ಲಿ ತಿಂಗಳುಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿ ಪುನಾರಂಭ!

ಹುಣಸೂರು: ನಗರದ ಮುಖ್ಯ ರಸ್ತೆಯಲ್ಲಿ ಕೊಳಚೆ ನೀರು ಹರಿಯುವ ಜಾಗದಲ್ಲಿ ಬೃಹತ್ ಗುಂಡಿ ತೆಗೆದು, ತಿಂಗಳುಗಳಿಂದ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದ ಹೆದ್ದಾರಿ ಕಾಮಗಾರಿಯು ಮಾಧ್ಯಮಗಳ ಸುದ್ದಿಯ ಬೆನ್ನಲ್ಲೇ ಕೊನೆಗೂ ಪುನಾರಂಭಗೊಂಡಿದೆ. ಆದರೆ, ಸದ್ಯ ನಡೆಯುತ್ತಿರುವ ತುರ್ತು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳದಿದ್ದರೆ ಮುಂದೆ ಭಾರಿ ಅನಾಹುತ ಸೃಷ್ಟಿಯಾಗಲಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.   ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಗುತ್ತಿಗೆದಾರರು ಮುಖ್ಯ ರಸ್ತೆಯ ಚರಂಡಿ ಹಾಗೂ ಕೊಳಚೆ ನೀರು ಹರಿಯುವ ಪ್ರದೇಶದಲ್ಲಿ ದೊಡ್ಡ ಗುಂಡಿ…

Read More

Solverwp- WordPress Theme and Plugin