ಜೋಧ್ಪುರ (ರಾಜಸ್ಥಾನ): ಇಂದಿನ ಆಧುನಿಕ ಜಗತ್ತಿನಲ್ಲಿ ಮೊಬೈಲ್ ಫೋನ್ ಪ್ರತಿಯೊಬ್ಬ ಮಾನವನ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ, ಇದೇ ಮೊಬೈಲ್ ಫೋನ್ ಸದ್ಯ ಜೀವಕ್ಕೆ ಕಂಟಕವಾಗುತ್ತಿರುವ ಸರಣಿ ಘಟನೆಗಳು ಆತಂಕ ಮೂಡಿಸುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ, ರಾಜಸ್ಥಾನದಲ್ಲಿ ವ್ಯಾಪಾರಿಯೊಬ್ಬರ ಪ್ಯಾಂಟ್ ಜೇಬಿನಲ್ಲಿದ್ದ ಮೊಬೈಲ್ ಫೋನ್ ದಿಢೀರನೆ ಸ್ಫೋಟಗೊಂಡಿರುವ ಭೀಕರ ಘಟನೆ ಇತ್ತೀಚೆಗೆ ನಡೆದಿದೆ. ಜೇಬಿನಿಂದ ಬಂದ ಹೊಗೆ, ಕ್ಷಣಾರ್ಧದಲ್ಲಿ ಸ್ಫೋಟ: ರಾಜಸ್ಥಾನದ ಜೋಧ್ಪುರದ ಮಂಡೋರ್ ಕೃಷಿ ಮಾರುಕಟ್ಟೆಯಲ್ಲಿ ವ್ಯಾಪಾರಿಯೊಬ್ಬರು ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ…
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ತೆರಳಿದ್ದ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಅವರಿಗೆ ರಾಯಚೂರು ಪೊಲೀಸರು ನೋಟಿಸ್ ನೀಡಿರುವುದು ಪ್ರಸ್ತುತ ತೀವ್ರ ವಿವಾದಕ್ಕೆ ಕಾರಣವಾಗಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಶ್ರೀರಾಮಸೇನೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ‘ಹಿಂದೂ ಮಹೋತ್ಸವ’ ಕಾರ್ಯಕ್ರಮಕ್ಕೆ ಆಗಮಿಸದಂತೆ ಪೊಲೀಸರು ಈ ನಿರ್ಬಂಧಕಾಜ್ಞೆ ವಿಧಿಸಿದ್ದಾರೆ. ಬೇರೆ ರಾಜ್ಯದ ವ್ಯಾಪ್ತಿಯಲ್ಲಿ ಕರ್ನಾಟಕ ಪೊಲೀಸರು ನೋಟಿಸ್ ಜಾರಿ ಮಾಡಲು ಮುಂದಾದ ನಡೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಲಿಂಗಸುಗೂರಿನ ಹಿಂದೂ…