ಬೀದರ್: ಕನ್ನಡ ಕಿರುತೆರೆಯ ಜನಪ್ರಿಯ ಹಾಸ್ಯ ಕಾರ್ಯಕ್ರಮಗಳಾದ ‘ಕಾಮಿಡಿ ಕಿಲಾಡಿಗಳು’ ಹಾಗೂ ‘ಮಜಾಭಾರತ’ ಮೂಲಕ ಮನೆಮಾತಾಗಿದ್ದ ಕಲಾವಿದ ಸಿದ್ಧಾರ್ಥ್ ಪರಸನೋರ (36) ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ. ಇಲ್ಲಿನ ಹುಮನಾಬಾದ್ ತಾಲೂಕಿನ ಹಣಕುಣಿ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ಸಿದ್ಧಾರ್ಥ್ ಅವರ ಮೃತದೇಹ ಪತ್ತೆಯಾಗಿದ್ದು, ಕಿರುತೆರೆ ಲೋಕ ಹಾಗೂ ಅಭಿಮಾನಿಗಳಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ. ಮೂಲತಃ ಹುಮನಾಬಾದ್ ನಗರದ ಟೀಚರ್ಸ್ ಕಾಲೋನಿಯ ನಿವಾಸಿಯಾದ ಸಿದ್ಧಾರ್ಥ್ ಅವರು, ಜೂನ್ 13ರಂದು ಸ್ನೇಹಿತರೊಂದಿಗೆ ಸೇರಿ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂತಾರಾಷ್ಟ್ರೀಯ ಮಟ್ಟದ ಡ್ರಗ್ಸ್ ಜಾಲವನ್ನು ಭೇದಿಸಿದ್ದಾರೆ. ಕಾರ್ಯಾಚರಣೆ ವೇಳೆ ಸುಮಾರು 70 ಲಕ್ಷದ 50 ಸಾವಿರ ರೂಪಾಯಿ ಮೌಲ್ಯದ 130 ಗ್ರಾಂ ತೂಕದ ಉನ್ನತ ದರ್ಜೆಯ ಕೊಕೇನ್ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಗಾಂಡಾ ಮೂಲದ ಜನತ್ ಎಂಬ ಮಹಿಳಾ ಡ್ರಗ್ ಪೆಡ್ಲರ್ ಹಾಗೂ ಆಕೆಯಿಂದ ಡ್ರಗ್ಸ್ ಪಡೆದುಕೊಳ್ಳುತ್ತಿದ್ದ ವಾಹಬ್ ಎಲ್ವಿಸ್ ಯುನಿಸ್ ಎಂಬಾತನನ್ನು ಸಿಸಿಬಿ ಪೊಲೀಸರು…