ಬೆಂಗಳೂರು: ಮಹಿಳೆಯೊಬ್ಬರ ಖಾಸಗಿ ವಿಡಿಯೋ ಚಿತ್ರೀಕರಿಸಿ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಡಿಫಾಲ್ಟ್ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ವಿಶೇಷ ತನಿಖಾ ದಳಕ್ಕೆ (SIT) ನೋಟಿಸ್ ಜಾರಿ ಮಾಡಿದೆ. ವಿಚಾರಣಾ ನ್ಯಾಯಾಲಯವು ತನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಶುಕ್ರವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ನ್ಯಾಯಪೀಠವು, “ಇದು ಯಾವ ಆಧಾರದ ಮೇಲೆ…
ಹೊಸಕೋಟೆ: ಸರ್ಕಾರಿ ಸಾರಿಗೆ ಸಂಸ್ಥೆಯ ಬಸ್ ಚಾಲಕನ ಬೇಜವಾಬ್ದಾರಿತನ ಮತ್ತು ಸಂಚಾರಿ ನಿಯಮಗಳ ಉಲ್ಲಂಘನೆಗೆ ಒಂದೇ ಕುಟುಂಬದ ಮೂವರು ಬಲಿಯಾಗಿರುವ ಅತ್ಯಂತ ಕರುಳು ಹಿಂಡುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿ ಶುಕ್ರವಾರ (ಜೂನ್ 19) ನಡೆದಿದೆ. ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಈ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ದಂಪತಿ ಹಾಗೂ ಅವರ ಎರಡು ವರ್ಷದ ಕಂದಮ್ಮ ಸ್ಥಳದಲ್ಲೇ ಜೀವ ಕಳೆದುಕೊಂಡಿದ್ದಾರೆ. ದೇವನಹಳ್ಳಿ ತಾಲೂಕಿನ ತೆಲ್ಲಹಳ್ಳಿ ಗ್ರಾಮದ ನಿವಾಸಿಗಳಾದ…