ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ವಿವಿಧೆಡೆ ಅಕ್ರಮವಾಗಿ ನಡೆಯುತ್ತಿದ್ದ ಜೂಜಾಟದ ಅಡ್ಡೆಗಳ ಮೇಲೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಏಕಕಾಲದಲ್ಲಿ ಭರ್ಜರಿ ದಾಳಿ ನಡೆಸಿದ್ದು, 49 ಮಂದಿ ಜೂಜುಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿ ವೇಳೆ ಜೂಜಾಟಕ್ಕೆ ಪಣವಾಗಿಟ್ಟಿದ್ದ ₹3.78 ಲಕ್ಷ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಕೊಳ್ಳೇಗಾಲ ತಾಲೂಕಿನಾದ್ಯಂತ ಪಾರ್ಟಿ ಹಾಲ್ಗಳಲ್ಲಿ ಕಾನೂನುಬಾಹಿರವಾಗಿ ಇಸ್ಪೀಟ್ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಗ್ರಾಮಾಂತರ ಪೊಲೀಸರು ಮೂರು ಪ್ರತ್ಯೇಕ ಸ್ಥಳಗಳ ಮೇಲೆ ದಾಳಿ ಸಂಘಟಿಸಿದ್ದರು. ಕೊಳ್ಳೇಗಾಲ…
ಕೆ.ಆರ್.ಪೇಟೆ: ಜೆಡಿಎಸ್ ಶಾಸಕ ಹೆಚ್.ಟಿ. ಮಂಜು ಅವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಲಾಗಿದ್ದ ಬಾಡೂಟ ಹಾಗೂ ಸೀರೆ ವಿತರಣೆ ಕಾರ್ಯಕ್ರಮದಲ್ಲಿ ಭಾರಿ ನೂಕುನುಗ್ಗಲು ಉಂಟಾಗಿದ್ದು, ಕಾಲ್ತುಳಿತದಿಂದಾಗಿ ಐವರು ಮಹಿಳೆಯರು ತೀವ್ರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ತಾಲೂಕಿನಲ್ಲಿ ನಡೆದಿದೆ. ಶಾಸಕರ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಸಾರ್ವಜನಿಕರಿಗಾಗಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಸಮಾರಂಭದಲ್ಲಿ ಸಾರ್ವಜನಿಕರಿಗೆ ಮಟನ್ ಊಟ (ಬಾಡೂಟ) ಹಾಗೂ ಮಹಿಳೆಯರಿಗೆ ಉಚಿತವಾಗಿ ಸೀರೆಗಳನ್ನು ವಿತರಿಸುವ ವ್ಯವಸ್ಥೆ ಮಾಡಲಾಗಿತ್ತು. ಉಚಿತ ಸೀರೆ ಹಾಗೂ…