ಶಿರಸಿ: ತಂದೆಯೊಂದಿಗೆ ಮನೆಯಲ್ಲಿ ನೆಮ್ಮದಿಯಾಗಿ ಮಲಗಿದ್ದ ಇಬ್ಬರು ಮುಗ್ಧ ಮಕ್ಕಳ ಮೇಲೆ ವಿಷಪೂರಿತ ಹಾವೊಂದು ದಾಳಿ ನಡೆಸಿದ ಪರಿಣಾಮ, 12 ವರ್ಷದ ಬಾಲಕನೊಬ್ಬ ಜವರಾಯನಿಗೆ ಬಲಿಯಾಗಿದ್ದು, ಆತನ ಸಹೋದರಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಳ್ಳಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಸ್ಥಳೀಯ 6ನೇ ತರಗತಿ ವಿದ್ಯಾರ್ಥಿ ಮಿಥನ್ ಪುಟ್ಟಪ್ಪ ನಾಯಕ್ (12) ಮೃತಪಟ್ಟ ದುರ್ದೈವಿ ಬಾಲಕನಾಗಿದ್ದು, ಈತನ ಸಹೋದರಿ ದೀಕ್ಷಾ ಪುಟ್ಟಪ್ಪ…
ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ರೌಡಿ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಬುಧವಾರ ಮುಂಜಾನೆ ಮುಂಡಗೋಡ ಪಟ್ಟಣದಾದ್ಯಂತ ರೌಡಿಶೀಟರ್ಗಳು ಹಾಗೂ ಅಕ್ರಮ ಬಡ್ಡಿ ವ್ಯವಹಾರ ನಡೆಸುತ್ತಿರುವವರ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ ವ್ಯಾಪಕ ಶೋಧ ಕಾರ್ಯ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ದೀಪನ್ ಎಂ.ಎನ್. ಅವರ ಖಡಕ್ ನಿರ್ದೇಶನದಂತೆ ಹಾಗೂ ಶಿರಸಿ ಡಿವೈಎಸ್ಪಿ ಗೀತಾ…