ಮಂಗಳೂರು: ನಗರದ ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಖದೀಮನನ್ನು ಮಂಗಳೂರು ಸಿಸಿಬಿ ಪೊಲೀಸರು ಜೂನ್ 25ರಂದು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯು ಹೊರಗಿನಿಂದ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿ ತಂದು, ಕುಳಾಯಿ ಗುಡ್ಡೆ ಪರಿಸರದಲ್ಲಿರುವ ತನ್ನ ಮನೆಯನ್ನೇ ಅಡ್ಡೆ ಮಾಡಿಕೊಂಡಿದ್ದ. ಅಲ್ಲಿಂದಲೇ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿರುವ ಬಗ್ಗೆ ಮಂಗಳೂರು ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು….
ಶಿವಮೊಗ್ಗ: ರಾಜ್ಯದ ಪ್ರಮುಖ ವಿದ್ಯುತ್ ಉತ್ಪಾದನಾ ಕೇಂದ್ರಗಳಲ್ಲಿ ಒಂದಾದ ಶರಾವತಿ ಜಲ ವಿದ್ಯುದಾಗಾರದಲ್ಲಿ (Sharavathi Generating Station) ಪೆನ್ಸ್ಟಾಕ್ ಪೈಪ್ಲೈನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ನೀರು ಸೋರಿಕೆಯಾಗಿ ವಿದ್ಯುದಾಗರದ ಒಳಭಾಗಕ್ಕೆ ನುಗ್ಗಿದ ಘಟನೆ ನಿನ್ನೆ ನಡೆದಿದೆ. ಇದರಿಂದಾಗಿ ಜಲ ವಿದ್ಯುದಾಗಾರದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶರಾವತಿ ವಿದ್ಯುದಾಗಾರದಲ್ಲಿ ತಲಾ 103 ಮೆಗಾವಾಟ್ ಸಾಮರ್ಥ್ಯದ ಒಟ್ಟು 10 ಘಟಕಗಳಿದ್ದು, ಒಟ್ಟು 1,035 ಮೆಗಾವಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿದೆ. ನಿನ್ನೆ ಮಧ್ಯಾಹ್ನ ಇಲ್ಲಿನ 7ನೇ ಘಟಕದ…