ಶಿವಮೊಗ್ಗ: ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದರೂ, ಕೆಲವೆಡೆ ಜಂಬಿಟ್ಟಿಗೆ ಕಲ್ಲು ಕ್ವಾರಿಗಳ ಚಟುವಟಿಕೆಗಳು ಎಡಬಿಡದೆ ನಡೆಯುತ್ತಿವೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ನಿಯಮಬಾಹಿರವಾಗಿ ನಡೆಯುತ್ತಿರುವ ಗಣಿಗಾರಿಕೆಯಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಕುರಿತು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ವ್ಯಕ್ತವಾಗಿದೆ. ಸ್ಥಳೀಯರ ಪ್ರಕಾರ, ಕಾರ್ಯಾಚರಿಸುತ್ತಿರುವ ಕೆಲವು ಕ್ವಾರಿಗಳಿಗೆ ಸಂಬಂಧಿಸಿದ ಅಗತ್ಯ ಪರವಾನಗಿ ಹಾಗೂ ನಿರಾಕ್ಷೇಪಣಾ ಪತ್ರಗಳ (NOC) ಸ್ಪಷ್ಟ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗುತ್ತಿಲ್ಲ. ನಿಯಮಗಳನ್ನು ಗಾಳಿಗೆ ತೂರಿ ಪರಿಸರಕ್ಕೆ ಹಾನಿಯಾಗುವ ರೀತಿಯಲ್ಲಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದ್ದು,…
ಹಾವೇರಿ: ಕಳ್ಳತನಕ್ಕೊಳಗಾದ ಚಿನ್ನಾಭರಣ, ಮೊಬೈಲ್ ಹಾಗೂ ವಾಹನಗಳು ಮರಳಿ ಸಿಗುವುದೇ ಅನುಮಾನ ಎಂಬ ಸಾರ್ವಜನಿಕರ ಆತಂಕಕ್ಕೆ ಹಾವೇರಿ ಜಿಲ್ಲಾ ಪೊಲೀಸರು ಕಾರ್ಯಕ್ಷಮತೆಯ ಮೂಲಕ ವಿಶ್ವಾಸದ ಉತ್ತರ ನೀಡಿದ್ದಾರೆ. ವಿವಿಧ ಕಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿ, ಬರೋಬ್ಬರಿ ₹2 ಕೋಟಿ 30 ಲಕ್ಷಕ್ಕೂ ಅಧಿಕ ಮೌಲ್ಯದ ಕಳುವಾದ ಸ್ವತ್ತನ್ನು ಪತ್ತೆಹಚ್ಚಿ ಮೂಲ ಮಾಲೀಕರಿಗೆ ಹಸ್ತಾಂತರಿಸುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ‘ಪ್ರಾಪರ್ಟಿ…