ಮಂಗಳೂರು: ಚಲಿಸುತ್ತಿದ್ದ ಖಾಸಗಿ ಬಸ್ನಲ್ಲೇ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದಡಿ ಬಸ್ ಕಂಡಕ್ಟರ್ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಜುಲೈ 10ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ನಿವಾಸಿ ಇರ್ಫಾನ್ (32) ಎಂದು ಗುರುತಿಸಲಾಗಿದೆ. ಆರೋಪಿ ಇರ್ಫಾನ್ ಮಂಗಳೂರು-ವಿಟ್ಲ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ನಲ್ಲಿ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದನು. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಜುಲೈ 9ರಂದು ಸಂಜೆ ಸುಮಾರು 5 ಗಂಟೆಯ ವೇಳೆಗೆ ಬಸ್ನಲ್ಲಿ ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಧಿಕೃತ ವೇಳಾಪಟ್ಟಿ ಪ್ರಕಟಗೊಂಡಿದೆ. ಜುಲೈ 26ರಿಂದ ಆನೆಗಳ ಗಜಪಯಣದೊಂದಿಗೆ ಉತ್ಸವದ ಪೂರ್ವ ಸಿದ್ಧತೆಗಳು ಆರಂಭವಾಗಲಿದ್ದು, ಅಕ್ಟೋಬರ್ 11ರಿಂದ 21ರವರೆಗೆ ಧಾರ್ಮಿಕ, ಸಾಂಪ್ರದಾಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಾಡಹಬ್ಬ ಅತ್ಯಂತ ವೈಭವದಿಂದ ಜರುಗಲಿದೆ. ಪ್ರಮುಖ ದಿನಾಂಕಗಳು ಮತ್ತು ವೇಳಾಪಟ್ಟಿ ಜುಲೈ 26 ಗಜಪಯಣ ಆರಂಭ: ನಾಗರಹೊಳೆ ಮತ್ತು ಸುತ್ತಮುತ್ತಲಿನ ಕಾಡುಗಳಿಂದ ದಸರಾ ಆನೆಗಳ ಆಗಮನ. ಅರಮನೆ ಆವರಣದಲ್ಲಿ ವಿಶೇಷ ತರಬೇತಿ ಹಾಗೂ ಆರೈಕೆ ಆರಂಭ. ಅಕ್ಟೋಬರ್ 11 ದಸರಾ…