ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತವರು ಮನೆಯಲ್ಲಿದ್ದ ಪತ್ನಿಯನ್ನು ವಾಪಸ್ ಕರೆತರಲು ಹೋದ ಪತಿಯ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಭೀಕರ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಬಾಬುಸಾಬ್ ಜಮಾದಾರ್ (35) ಕೊಲೆಯಾದ ದುರ್ದೈವಿ ಪತಿ. ಗಲಾಟೆ ವೇಳೆ ತಡೆಯಲು ಬಂದ ಇವರ ಸ್ನೇಹಿತ ಅಪ್ಪಾಲಾಲ ಮಕಾಸಿ ಎಂಬುವವರಿಗೂ ಗಂಭೀರ ಗಾಯಗಳಾಗಿದ್ದು, ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಬಾಬುಸಾಬ್ ಜಮಾದಾರ್ ಐದು…
ಬೆಂಗಳೂರು: ರಾಜಧಾನಿಯಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಬರೋಬ್ಬರಿ 12 ಕೋಟಿ ರೂಪಾಯಿ ಮೌಲ್ಯದ ಭಾರಿ ಪ್ರಮಾಣದ ಡ್ರಗ್ಸ್ ಜಪ್ತಿ ಮಾಡುವಲ್ಲಿ ಗಿರಿನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ನೈಜೀರಿಯಾ ಪ್ರಜೆ ಚಿಗ್ಬಂಡು ನ್ವಾಂಕಪ ಎಂದು ಗುರುತಿಸಲಾಗಿದೆ. ಬಂಧಿತನಿಂದ 5 ಕೆ.ಜಿ ತೂಕದ ಎಂಡಿಎಂಎ (MDMA) ಕ್ರಿಸ್ಟಲ್ ಹಾಗೂ 1,000 ಎಕ್ಸ್ಟಸಿ (Ecstasy) ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು…