ವಿಜಯಪುರ: ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಯುವಜನತೆ ಮತ್ತು ವಿದ್ಯಾರ್ಥಿಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಡಿ ಬೆಳಗಾವಿ ಉತ್ತರ ವಲಯದ ಐದು ಜಿಲ್ಲೆಗಳಲ್ಲಿ ‘ಆಪರೇಷನ್ ರೈಸ್’ ಹಾಗೂ ‘ಬೇಡ ಬ್ರೋ’ ವಿಶೇಷ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಉತ್ತರ ವಲಯದ ಪೊಲೀಸ್ ಮಹಾನಿರೀಕ್ಷಕರಾದ (IGP) ಸಂದೀಪ್ ಪಾಟೀಲ್ ಅವರು ತಿಳಿಸಿದರು. ಬುಧವಾರ ವಿಜಯಪುರ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಜನತೆಯನ್ನು ಮಾದಕ ವ್ಯಸನದಂತಹ ದುಷ್ಟ ಚಟಗಳಿಂದ…
ಆನೇಕಲ್: ಇಲ್ಲಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆಸ್ಪತ್ರೆಯ ಮೊದಲ ಮಹಡಿಯಲ್ಲಿರುವ ಶಸ್ತ್ರಚಿಕಿತ್ಸೆ ಘಟಕದಲ್ಲಿ (Operation Theatre) ಸಂಭವಿಸಿದ ಶಾರ್ಟ್ ಸರ್ಕಿಟ್ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಮಂಗಳವಾರ ಬೆಳಿಗ್ಗೆ ಸುಮಾರು 8:30ರ ಹೊತ್ತಿಗೆ ಶಸ್ತ್ರಚಿಕಿತ್ಸೆ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಇಡೀ ಮಹಡಿ ದಟ್ಟ ಹೊಗೆಯಿಂದ ಆವೃತವಾಯಿತು. ಅದೃಷ್ಟವಶಾತ್, ಘಟನೆ ಸಂಭವಿಸಿದ ಸಮಯದಲ್ಲಿ ಘಟಕದಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ…