ಹೊಸದಿಲ್ಲಿ: ಯುಪಿಐ (UPI) ವಹಿವಾಟುಗಳ ಮೇಲೆ ಶೀಘ್ರದಲ್ಲೇ ಶುಲ್ಕ ವಿಧಿಸಲಾಗುತ್ತದೆ ಎಂಬ ವದಂತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಸಣ್ಣ ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ದೊಡ್ಡ ನಿರಾಳತೆ ಸಿಕ್ಕಂತಾಗಿದೆ. ’ಪೇಮೆಂಟ್ ಅಂಡ್ ಸೆಟಲ್ಮೆಂಟ್ ಸಿಸ್ಟಮ್ಸ್ (ತಿದ್ದುಪಡಿ) ಮಸೂದೆ, 2026′ ಹಿನ್ನೆಲೆಯಲ್ಲಿ ಯುಪಿಐ ಮೇಲೆ ‘ಮರ್ಚಂಟ್ ಡಿಸ್ಕೌಂಟ್ ರೇಟ್’ (MDR) ಶುಲ್ಕ ಜಾರಿಯಾಗಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪ್ರಸ್ತುತ ಯುಪಿಐ ವಹಿವಾಟುಗಳ ಮೇಲೆ ಯಾವುದೇ…
ಶಿವಮೊಗ್ಗ: ಜಿಲ್ಲೆಯ ಚೋರಡಿ ಸೇತುವೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಿಗಂದೂರು ಚೌಡೇಶ್ವರಿ ದೇವಿ ದರ್ಶನಕ್ಕೆ ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆಯ ವಿವರ: ಬೆಂಗಳೂರಿನಿಂದ ಆರು ಮಂದಿ ಸ್ನೇಹಿತರು ಒಂದೇ ಕಾರಿನಲ್ಲಿ ಸಿಗಂದೂರು ದೇವಸ್ಥಾನದತ್ತ ಪ್ರಯಾಣಿಸುತ್ತಿದ್ದರು. ಶಿವಮೊಗ್ಗ ಸಮೀಪದ ಚೋರಡಿ ಬ್ರಿಡ್ಜ್ ಬಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಡಿವೈಡರ್ಗೆ ಭೀಕರವಾಗಿ ಡಿಕ್ಕಿ ಹೊಡೆದು, ರಸ್ತೆಯಲ್ಲೇ ಮೂರು ಬಾರಿ ಪಲ್ಟಿಯಾಗಿದೆ. …