ಆನೇಕಲ್: ಸರ್ಕಾರಿ ಗೋದಾಮಿನಲ್ಲಿ ಬಡವರಿಗಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ಕಿ, ಗೋಧಿ ಹಾಗೂ ರಾಗಿಯನ್ನು ಅಕ್ರಮವಾಗಿ ಹೊರಗೆ ಸಾಗಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಿರುವ ಭಾರಿ ಹಗರಣ ಆನೇಕಲ್ ತಾಲ್ಲೂಕಿನ ರಾಮಕೃಷ್ಣಾಪುರದಲ್ಲಿ ಬೆಳಕಿಗೆ ಬಂದಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ (KFCSC) ಗೋದಾಮಿನಲ್ಲಿ ಈ ಬೃಹತ್ ಅಕ್ರಮ ನಡೆದಿದ್ದು, ಸುಮಾರು 86.65 ಲಕ್ಷ ರೂ. ಮೌಲ್ಯದ ಭಾರಿ ಪ್ರಮಾಣದ ಆಹಾರ ಧಾನ್ಯ ನಾಪತ್ತೆಯಾಗಿದೆ. ಐವರ ವಿರುದ್ಧ ಎಫ್ಐಆರ್: ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ…
ಶಿವಮೊಗ್ಗ: ಶಾಲೆ ತೊರೆದ ಮಕ್ಕಳನ್ನು ಮರಳಿ ಶಿಕ್ಷಣದ ಮುಖ್ಯವಾಹಿನಿಗೆ ಕರೆತರುವ ಐತಿಹಾಸಿಕ ಮತ್ತು ಮಹತ್ವದ ಹೆಜ್ಜೆಯನ್ನಿಟ್ಟಿರುವ ಶಿವಮೊಗ್ಗ ಜಿಲ್ಲಾಡಳಿತ, ತಾಲೂಕಿನಾದ್ಯಂತ ಬೃಹತ್ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದೆ. ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ನಾಯ್ಕ್ ಹಾಗೂ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ವರ್ ಸೇರಿದಂತೆ ವಿವಿಧ ಇಲಾಖೆಗಳ ಉನ್ನತಾಧಿಕಾರಿಗಳ ತಂಡವೇ ನೇರವಾಗಿ ಫೀಲ್ಡಿಗಿಳಿದು ಪೋಷಕರ ಮನವೊಲಿಸುವ ಕಾರ್ಯದಲ್ಲಿ ತೊಡಗಿದೆ. ಮೂರು ಇಲಾಖೆಗಳ ಜಂಟಿ ಅಭಿಯಾನ: ಮಕ್ಕಳ ಭವಿಷ್ಯವನ್ನು ಸಾಗರದಷ್ಟು ಉಜ್ವಲಗೊಳಿಸುವ…