ಧಾರವಾಡದಲ್ಲಿ ಕೆಪಿಎಸ್ಸಿ ಹಾಗೂ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದ ‘ಅಕ್ಸಾ’ ಸಂಘಟನೆಯ ಮುಖಂಡ ಕಾಂತಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೋರಾಟಕ್ಕೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ್ದರೂ ಪ್ರತಿಭಟನೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮಿಚಿಗನ್ ಮೈದಾನದಲ್ಲಿ ಬಿಗಿ ಭದ್ರತೆ ಧಾರವಾಡದ ಮಿಚಿಗನ್ ಮೈದಾನದಲ್ಲಿ ‘ಅಕ್ಸಾ’ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಲಾಗಿತ್ತು. ಆದರೆ, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ…
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಮಹಿಳಾ ಕಾರಾಗೃಹಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ದಿಢೀರ್ ಭೇಟಿ ನೀಡಿ ಸುದೀರ್ಘ ಪರಿಶೀಲನೆ ನಡೆಸಿದರು. ಮಹಿಳಾ ಬ್ಯಾರಕ್ಗಳಿಗೆ ಭೇಟಿ ನೀಡಿದ ಅವರು, ಜೈಲಿನಲ್ಲಿರುವ ಮಹಿಳಾ ಕೈದಿಗಳಿಗೆ ಸಿಗುತ್ತಿರುವ ಮೂಲಭೂತ ಸೌಲಭ್ಯಗಳು, ಮಕ್ಕಳ ವಿದ್ಯಾಭ್ಯಾಸ, ಆಹಾರದ ಗುಣಮಟ್ಟ ಹಾಗೂ ಕಾನೂನು ನೆರವಿನ ಕುರಿತು ವಿವರವಾದ ಮಾಹಿತಿ ಕಲೆಹಾಕಿದರು. ಜೈಲೂಟದ ಗುಣಮಟ್ಟ ಪರಿಶೀಲನೆ ಕಾರಾಗೃಹದಲ್ಲಿದ್ದ ೨೦೦ಕ್ಕೂ ಅಧಿಕ ಮಹಿಳಾ ಕೈದಿಗಳ ಸ್ಥಿತಿಗತಿ ಪರಿಶೀಲಿಸಿದ ಅಧ್ಯಕ್ಷರು, ಕೈದಿಗಳಿಗೆ ನೀಡಲಾಗುತ್ತಿರುವ…