ಉಡುಪಿ: ಅಲೆವೂರು ಗ್ರಾಮದ ಕೆಸ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಗಿ ಪರಿಸರದಲ್ಲಿರುವ ಬಾಳೆಹಣ್ಣಿನ ರಖಂ ವ್ಯಾಪಾರಸ್ಥರು ಮತ್ತು ದಾಸ್ತಾನುದಾರರ ಗೋದಾಮುಗಳ ಮೇಲೆ ಅಧಿಕಾರಿಗಳ ತಂಡ ಗುರುವಾರ ಬೆಳಿಗ್ಗೆ ಏಕಕಾಲದಲ್ಲಿ ಭರ್ಜರಿ ದಾಳಿ ನಡೆಸಿದೆ. ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ಬಳಸಲಾಗುತ್ತಿದ್ದ ಹಾನಿಕಾರಕ ರಾಸಾಯನಿಕಗಳು ಹಾಗೂ ಕೃತಕ ಬಣ್ಣಗಳನ್ನು ಜಪ್ತಿ ಮಾಡಲಾಗಿದೆ. ಸಹಾಯಕ ಕಮಿಷನರ್ (ಎಸಿ) ರಶ್ಮಿ ಎಸ್.ಆರ್. ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ಈ ಜಂಟಿ ಕಾರ್ಯಾಚರಣೆ ನಡೆಸಿದ್ದು, ಅಲೆವೂರು ವ್ಯಾಪ್ತಿಯ ಸುಮಾರು ೩…
ರಾಣೇಬೆನ್ನೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಗಳನ್ನು ಉಲ್ಲಂಘಿಸಿ, ಸೂಕ್ತವಾಗಿ ಪ್ಯಾಕ್ ಮಾಡದೆ ಸಾಗಿಸುತ್ತಿದ್ದ ಒಟ್ಟು ೧,೦೩೩ ಕೆ.ಜಿ. ಕೋಳಿ ಮಾಂಸವನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬೆಂಗಳೂರಿನ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆದೇಶದಂತೆ, ಹಾವೇರಿ ಜಿಲ್ಲಾ ಅಂಕಿತಾಧಿಕಾರಿಗಳ ಮಾರ್ಗದರ್ಶನದಲ್ಲಿ ಅಧಿಕಾರಿಗಳು ರಾಣೇಬೆನ್ನೂರು ತಹಶೀಲ್ದಾರರೊಂದಿಗೆ ಆಯೋಜಿಸಿದ್ದ ಜಂಟಿ ಕಾರ್ಯಾಚರಣೆಯಲ್ಲಿ ಆ.೧೩ರಂದು ತಾಲೂಕಿನ ವಿವಿಧ ಮಾಂಸ ಸಂಸ್ಕರಣಾ ಘಟಕಗಳ ಮೇಲೆ ದಾಳಿ ನಡೆಸಿ ಈ ಪರಿಶೀಲನೆ ನಡೆಸಿದ್ದಾರೆ. ವೆಂಕಟೇಶ್ವರ ಹ್ಯಾಚರೀಸ್ನಲ್ಲಿ…