ಹಾವೇರಿ: ಜಿಲ್ಲೆಯ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮಟಕಾ ಹಾಗೂ ಇಸ್ಪೀಟ್ ಜೂಜಾಟದ ಅಡ್ಡಗಷ್ಟಗಳ ಮೇಲೆ ಪೊಲೀಸರು ಭರ್ಜರಿ ದಾಳಿ ನಡೆಸಿದ್ದು, ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಸಂಗೂರಿನಲ್ಲಿ ಮಟಕಾ ಜೂಜಾಟ: ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಂಗೂರ ಗ್ರಾಮದ ಬಸ್ ನಿಲ್ದಾಣದ ಬಳಿ ಸಾರ್ವಜನಿಕರನ್ನು ಕೂಗಿ ಕರೆದು, ಒಂದು ರೂಪಾಯಿಗೆ ₹80 ನೀಡುವುದಾಗಿ ಆಮಿಷ ಒಡ್ಡಿ ಮಟಕಾ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯ ವಿರುದ್ಧ ಪೊಲೀಸರು ಕಲಂ 78(3) ಕೆ.ಪಿ. ಕಾಯ್ದೆಯಡಿ ಪ್ರಕರಣ…
ಬೆಂಗಳೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ, ಮಹಿಳಾ ಕೈದಿಗಳೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆ ಹಾಗೂ ಕುಂದುಕೊರತೆಗಳನ್ನು ಆಲಿಸಿದರು. ಕಾರಾಗೃಹದ ಅಡುಗೆಮನೆ, ಆಹಾರದ ಗುಣಮಟ್ಟ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ವೈದ್ಯಕೀಯ ಹಾಗೂ ಮನೋವೈದ್ಯಕೀಯ ಸೇವೆಗಳು ಮತ್ತು ಮಕ್ಕಳ ಆರೈಕೆ ಕೇಂದ್ರ ಸೇರಿದಂತೆ ಪ್ರಮುಖ ಮೂಲಭೂತ ಸೌಲಭ್ಯಗಳನ್ನು ಅವರು ಖುದ್ದಾಗಿ ಪರಿಶೀಲಿಸಿದರು. ಇದೇ ವೇಳೆ ಕಾರಾಗೃಹದಲ್ಲಿರುವ ಶಾಲೆ ಹಾಗೂ…