ಮೈಸೂರು: ಮೈಸೂರು ಜಿಲ್ಲಾ ಪ್ರವಾಸದ ಕೈಗೊಂಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಇಂದು ನಗರದ ಮುಖ್ಯ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಮಹಿಳಾ ಪ್ರಯಾಣಿಕರಿಗೆ ಕಲ್ಪಿಸಲಾಗಿರುವ ಮೂಲಭೂತ ಸೌಕರ್ಯಗಳನ್ನು ಖುದ್ದಾಗಿ ಪರಿಶೀಲಿಸಿದರು. ತಪಾಸಣೆ ವೇಳೆ ಬಸ್ ನಿಲ್ದಾಣದಲ್ಲಿರುವ ಮಹಿಳಾ ಆಸನ ವ್ಯವಸ್ಥೆ, ಶಿಶು ಆರೈಕೆ ಕೇಂದ್ರ (ಮಕ್ಕಳಿಗೆ ಹಾಲುಣಿಸುವ ಕೊಠಡಿ), ಶುದ್ಧ ಕುಡಿಯುವ ನೀರಿನ ಪೂರೈಕೆ ಹಾಗೂ ಶೌಚಾಲಯಗಳ ನೈರ್ಮಲ್ಯ ಸ್ಥಿತಿಗತಿಯನ್ನು ಅಧಿಕಾರಿಗಳೊಂದಿಗೆ ಪರಿಶೀಲನೆಗೆ ಒಳಪಡಿಸಲಾಯಿತು. ಮಹಿಳಾ ಸಿಬ್ಬಂದಿಯಿಂದ ಸಾಲು ಸಾಲು ದೂರು:…
ಹಾಸನ: ಸಕಲೇಶಪುರ–ಬೇಲೂರು ರಸ್ತೆ ಕಾಮಗಾರಿ ಕಳೆದ ಒಂದು ವರ್ಷದಿಂದ ಮಂದಗತಿಯಲ್ಲಿ ಸಾಗುತ್ತಿದ್ದು, ಶುಕ್ರವಾರ ಒಳಚರಂಡಿಗಾಗಿ ತೆಗೆದಿದ್ದ ಗುಂಡಿಯಲ್ಲಿ ಸಾರಿಗೆ ಬಸ್ವೊಂದು ಸಿಲುಕಿಬಿದ್ದ ಘಟನೆ ನಡೆದಿದೆ. ಶುಕ್ರವಾರ ಮಧ್ಯಾಹ್ನ ೨ ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದ್ದು, ರಸ್ತೆಯ ಮಧ್ಯೆ ಬಸ್ ಸಿಲುಕಿಕೊಂಡಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಯಿತು. ಘಟನೆಯಿಂದಾಗಿ ಬಸ್ಸಿನಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾದರು. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ಅರ್ಧಕ್ಕೆ ನಿಂತ ಕಾಮಗಾರಿ: ರಸ್ತೆ ಅಗಲೀಕರಣ ಹಾಗೂ ಡಾಂಬರೀಕರಣ ಕಾಮಗಾರಿ ಇಂದಿಗೂ…