ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿವಿಧ ಪೇಯಿಂಗ್ ಗೆಸ್ಟ್ (PG) ವಸತಿ ನಿಲಯಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ನಿಯಮ ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ 23 ಪಿಜಿಗಳಿಗೆ ನೋಟಿಸ್ ನೀಡಿದ್ದಾರೆ. ನಗರದಾದ್ಯಂತ ಒಟ್ಟು 64 ಪಿಜಿಗಳಲ್ಲಿ ವ್ಯಾಪಕ ತಪಾಸಣೆ ಕೈಗೊಂಡ ಅಧಿಕಾರಿಗಳ ತಂಡ, ನೈರ್ಮಲ್ಯ ಕೊರತೆ ಹಾಗೂ ಆಹಾರ ಸುರಕ್ಷತಾ ಮಾನದಂಡಗಳನ್ನು ಗಾಳಿಗೆ ತೂರಿದ ಎಷ್ಟೋ ಪಿಜಿಗಳ ಅಡುಗೆ ಮನೆಗಳನ್ನು ಪರಿಶೀಲಿಸಿತು. ಈ ವೇಳೆ ಹಲವು ಕಡೆಗಳಲ್ಲಿ ಅವಧಿ ಮೀರಿದ…
ದಾಬಸ್ಪೇಟೆ: ಅಕ್ರಮವಾಗಿ ಜಿಲೆಟಿನ್ ಕಡ್ಡಿ ಹಾಗೂ ಡಿಟೋನೇಟರ್ ಸಾಗಣೆ ಮಾಡುತ್ತಿದ್ದ ಜಾಲದ ಮೇಲೆ ದಾಬಸ್ಪೇಟೆ ಪೊಲೀಸರು ದಿಢೀರ್ ದಾಳಿ ನಡೆಸಿ, ಆರೋಪಿ ಶಂಕರ್ ಎಂಬಾತನನ್ನು ಬಂಧಿಸಿದ್ದಾರೆ. ಬಂದಿತನಿಂದ 600 ಜಿಲೆಟಿನ್ ಕಡ್ಡಿ ಹಾಗೂ 100 ಎಲೆಕ್ಟ್ರಿಕ್ ಡಿಟೋನೇಟರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಡಿವೈಎಸ್ಪಿ (DySP) ಉಮಾರಾಣಿ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ನಡೆದ ಈ ಯಶಸ್ವಿ ಕಾರ್ಯಾಚರಣೆಯಲ್ಲಿ, ಆರೋಪಿಯು ಕೊರಟಗೆರೆಯಿಂದ ಜಾಜೂರಿನತ್ತ ಕಾರಿನಲ್ಲಿ ಸ್ಪೋಟಕ ವಸ್ತುಗಳನ್ನು ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ರೆಡ್ಹ್ಯಾಂಡಾಗಿ ಸೆರೆಹಿಡಿದಿದ್ದಾರೆ. ಯಾವುದೇ…