ಬೀರೂರು: ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ನಿರ್ಮಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 12 ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆಯನ್ನು ಸೆಪ್ಟೆಂಬರ್ 10 ರಂದು ವೈಭವದ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಲಾಗುವುದು. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಪ್ರತಿಮ ಶೌರ್ಯ, ತ್ಯಾಗ ಮತ್ತು ದೇಶಪ್ರೇಮ ಮೆರೆದ ವೀರ ಸೇನಾನಿ ರಾಯಣ್ಣ ಅವರ ಸ್ಮರಣಾರ್ಥ ಈ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಯುವಜನತೆಯಲ್ಲಿ ದೇಶಭಕ್ತಿ ಹಾಗೂ ರಾಯಣ್ಣನವರ ಆದರ್ಶಗಳನ್ನು ಬಿತ್ತುವ ಉದ್ದೇಶದಿಂದ ಕಾರ್ಯಕ್ರಮದ ಅಂಗವಾಗಿ ಹಲವು ಸಾಂಸ್ಕೃತಿಕ ಹಾಗೂ ವೈಚಾರಿಕ ವೇದಿಕೆಗಳನ್ನು…
ಕೃಷ್ಣರಾಜಪೇಟೆ: ತಾಲೂಕಿನ ನಾರ್ಗೋನಹಳ್ಳಿ ಗ್ರಾಮದಲ್ಲಿ ಹಳೆಯ ಮನೆಯ ಮೇಲ್ಚಾವಣಿ ಹಾಗೂ ಗೋಡೆಗಳು ಕುಸಿದು ಬಿದ್ದಿದ್ದು, ಮಂಜುಳಾ ಸಣ್ಣರಾಜು ಅವರ ಕುಟುಂಬ ತೀವ್ರ ಆತಂಕದ ವಾತಾವರಣದಲ್ಲಿ ದಿನ ದೂಡುವಂತಾಗಿದೆ. ಸುಮಾರು 25 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಈ ಮನೆಯ ಗೋಡೆಗಳು ಸಂಪೂರ್ಣ ಶಿಥಿಲಗೊಂಡಿದ್ದು, ಮೇಲ್ಚಾವಣಿಯೂ ಹಾನಿಯಾಗಿದೆ. ಮಳೆ ಹಾಗೂ ಪ್ರತಿಕೂಲ ಹವಾಮಾನದ ಸಂದರ್ಭದಲ್ಲಿ ಯಾವ ಕ್ಷಣದಲ್ಲಿ ಮನೆ ಕುಸಿದು ಬೀಳುತ್ತದೆಯೋ ಎಂಬ ಭಯದಲ್ಲೇ ಕುಟುಂಬಸ್ಥರು ಕಾಲ ಕಳೆಯುತ್ತಿದ್ದಾರೆ. ಅಧಿಕಾರಿಗಳ ಅಲೆದಾಟ, ಪರಿಹಾರ ಸಿಗದ ನಿರಾಶೆ: ಸುರಕ್ಷಿತ…