ದೋಡಾ (ಜಮ್ಮು ಮತ್ತು ಕಾಶ್ಮೀರ): ಜಾತ್ರೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಯುವತಿಯೊಬ್ಬಳು ಸೇತುವೆ ಬಳಿ ನಿಗೂಢ ರೀತಿಯಲ್ಲಿ ಚೆನಾಬ್ ನದಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಪ್ರೇಮ್ ನಗರದಲ್ಲಿ ನಡೆದಿದೆ. ಪಾಯಲ್ ದೇವಿ ನಾಪತ್ತೆಯಾದ ಯುವತಿ. ಈ ಘಟನೆಯ ಆತಂಕಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯ ವಿವರ: ಜಾತ್ರೆಗೆ ತೆರಳಿದ್ದ ಪಾಯಲ್ ದೇವಿ, ವಾಪಸ್ ಮನೆಗೆ ಬರಲು ಪರಿಚಿತ ವ್ಯಕ್ತಿಯೊಬ್ಬರ ದ್ವಿಚಕ್ರವಾಹನದಲ್ಲಿ ಹೊರಟಿದ್ದರು. ಮಾರ್ಗಮಧ್ಯೆ ಪ್ರೇಮ್ ನಗರದ ಸೇತುವೆ ಬಳಿ ಬಂದಾಗ…
ಬಾಗಲಕೋಟೆ: ಸರ್ಕಾರದ ಸಹಾಯಧನದ ಮಂಜೂರಾತಿ ಆದೇಶ ನೀಡಲು ಹಾಗೂ ವಾಹನದ ಜಿಪಿಎಸ್ ಫೋಟೊ ಮಾಡಲು ₹3 ಸಾವಿರ ಲಂಚ ಪಡೆಯುತ್ತಿದ್ದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಪ್ರಥಮ ದರ್ಜೆ ಸಹಾಯಕ (FDA) ಗುರುನಾಥ ಎಂ. ಮಸಳಿ ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಮುಧೋಳ ತಾಲ್ಲೂಕಿನ ಜಾಲಿಬೇರಿ ಗ್ರಾಮದ ಬಸವರಾಜ ಗೋವಿಂದಪ್ಪ ಮೆಟಗುಡ್ಡ ಅವರು ನೀಡಿದ ದೂರಿನ ಮೇರೆಗೆ ಈ ದಾಳಿ ನಡೆದಿದೆ. ಪ್ರಕರಣದ ಹಿನ್ನೆಲೆ: ಫಿರ್ಯಾದಿದಾರರಿಗೆ ಕರ್ನಾಟಕ…