ದೇವನಹಳ್ಳಿ: ವಿಯೆಟ್ನಾಂ ದೇಶದಿಂದ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು ₹1.38 ಕೋಟಿ ಮೌಲ್ಯದ 3.93 ಕೆಜಿ ತೂಕದ ಉನ್ನತ ತಳಿಯ ಹೈಡ್ರೋಫೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆಯ ವಿವರ: ಆರೋಪಿಯು ವಿಯೆಟ್ನಾಂ ದೇಶದ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಆಗಮಿಸಿದ್ದನು. ಈ ವೇಳೆ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ…
ಕಲಬುರಗಿ : ದೇಶದ ಸ್ವಾತಂತ್ರ್ಯೋತ್ಸವದ ಮಾದರಿಯಲ್ಲಿಯೇ ‘ಕಲ್ಯಾಣ ಕರ್ನಾಟಕ ಉತ್ಸವ’ವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಬೇಕು. ಮುಖ್ಯಮಂತ್ರಿಗಳು ಕೇವಲ ಕಾಟಾಚಾರಕ್ಕಾಗಿ ಕಲಬುರಗಿಗೆ ಆಗಮಿಸಿ ಧ್ವಜಾರೋಹಣ ನಡೆಸದೆ, ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ಹಾಗೂ ವಿಶೇಷ ಸೌಲಭ್ಯಗಳನ್ನು ಘೋಷಣೆ ಮಾಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಸುರೇಶ ಬಡಿಗೇರ ಒತ್ತಾಯಪಡಿಸಿದರು. ನಗರದ ಸರ್ವಜ್ಞ ಕಾಲೇಜಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಹಾಗೂ ಜೈ ಕರವೇ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ಕಲ್ಯಾಣ ಕರ್ನಾಟಕ ವಿಮೋಚನೆಯ ಮಹತ್ವ”…