ಚಿಕ್ಕೋಡಿ: ಸಂಚಾರ ನಿಯಮ ಉಲ್ಲಂಘನೆ ತಡೆಯಲು ಅಳವಡಿಸಲಾಗಿರುವ ಕೃತಕ ಬುದ್ಧಿಮತ್ತೆಯ (AI) ಕ್ಯಾಮೆರಾವೊಂದು ಮಾಡಿದ ಎಡವಟ್ಟಿನಿಂದಾಗಿ ಕಾರು ಮಾಲೀಕರೊಬ್ಬರು ತಬ್ಬಿಬ್ಬಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ಅಥಣಿ ಪಟ್ಟಣದ ನಿವಾಸಿ ಸುಭಾಷ್ ಬೋಜನೆ ಎಂಬುವವರೇ ಈ ವಿಚಿತ್ರ ದಂಡದ ನೋಟಿಸ್ಗೆ ಒಳಗಾದ ಕಾರು ಮಾಲೀಕ. ಘಟನೆಯ ವಿವರ: ಪಟ್ಟಣದ ಅಂಬೇಡ್ಕರ್ ಸರ್ಕಲ್ನಲ್ಲಿ ಚಲಿಸುತ್ತಿದ್ದ ಸುಭಾಷ್ ಅವರ ಕಾರಿನ ಫೋಟೊವನ್ನು ಸೆರೆಹಿಡಿದಿದ್ದ ಎಐ ಕ್ಯಾಮೆರಾ, ಸಂಚಾರ ನಿಯಮ ಉಲ್ಲಂಘನೆಯಾಗಿದೆ ಎಂದು ಇ-ಚಲನ್ ಜನರೇಟ್ ಮಾಡಿತ್ತು….
ಕೊಪ್ಪಳ: 2026ನೇ ಸಾಲಿನ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆಪ್ಟೆಂಬರ್ 14 ರಿಂದ 20 ರ ನಡುವೆ ನಾಲ್ಕು ದಿನಗಳ ಕಾಲ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಆದೇಶ ಹೊರಡಿಸಿದ್ದಾರೆ. ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಆಧರಿಸಿ, ಕರ್ನಾಟಕ ಅಬಕಾರಿ ಕಾಯ್ದೆ 1965ರ…