ಬೀದರ: ಜಿಲ್ಲೆಯಲ್ಲಿ ಜೂಜು ಮತ್ತು ಅಕ್ರಮ ಚಟುವಟಿಕೆಗಳ ತಡೆಗೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಮಂಠಾಳ ಪೊಲೀಸ್ ಠಾಣಾ ವ್ಯಾಪ್ತಿಯ ಉಜಳಂಬ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಮಟಕಾ ಜೂಜಾಟದ ಮೇಲೆ ಪೊಲೀಸರು ಯಶಸ್ವಿ ದಾಳಿ ನಡೆಸಿದ್ದಾರೆ.
ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಪ್ರದೀಪ್ ಗುಂಟಿ (ಐ.ಪಿ.ಎಸ್) ರವರ ನೇರ ಮಾರ್ಗದರ್ಶನ ಹಾಗೂ ನಿರ್ದೇಶನದಂತೆ ಈ ದಾಳಿ ನಡೆದಿದೆ.
ಉಜಳಂಬ ಗ್ರಾಮದ ಸಾರ್ವಜನಿಕ ಸ್ಥಳವೊಂದರಲ್ಲಿ ವ್ಯಕ್ತಿಯೊಬ್ಬ ಮಟಕಾ ಜೂಜಾಟದಲ್ಲಿ ತೊಡಗಿರುವ ಕುರಿತು ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಆಧಾರದ ಮೇಲೆ ಪಿ.ಎಸ್.ಐ ಶ್ರೀಮತಿ ಸುವರ್ಣಾ ರವರ ನೇತೃತ್ವದ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ತಕ್ಷಣ ಸ್ಥಳಕ್ಕೆ ತೆರಳಿ ದಾಳಿ ನಡೆಸಿದೆ.
ಕಾರ್ಯಾಚರಣೆ ನಡೆದ ಸ್ಥಳ: ಉಜಳಂಬ ಗ್ರಾಮ, ಮಂಠಾಳ ಠಾಣಾ ವ್ಯಾಪ್ತಿ
ಜಪ್ತಿ ಮಾಡಿದ ನಗದು: ₹640/- (ಆರು ನೂರ ನಲವತ್ತು ರೂಪಾಯಿಗಳು)
ಕಾನೂನು ಕ್ರಮ: ಮಟಕಾ ಆಟದಲ್ಲಿ ತೊಡಗಿದ್ದ ಆರೋಪಿತನನ್ನು ವಶಕ್ಕೆ ಪಡೆದು, ಆತನ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಮಟಕಾ ಜೂಜಾಟದ ಮೇಲಿನ ಈ ಯಶಸ್ವಿ ದಾಳಿಯಲ್ಲಿ ಶ್ರಮಿಸಿದ ಪಿ.ಎಸ್.ಐ ಸುವರ್ಣಾ ಹಾಗೂ ಠಾಣೆಯ ಸಿಬ್ಬಂದಿಯವರ ಸಮಯೋಚಿತ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
”ಬೀದರ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಹಾಗೂ ಅಕ್ರಮ ಚಟುವಟಿಕೆಗಳ ತಡೆಗೆ ಜಿಲ್ಲಾ ಪೊಲೀಸರ ಖಡಕ್ ಕಾರ್ಯಾಚರಣೆಯು ಹೀಗೆಯೇ ಮುಂದುವರೆಯಲಿದೆ.”
— ಪ್ರದೀಪ್ ಗುಂಟಿ, ಐ.ಪಿ.ಎಸ್., ಪೊಲೀಸ್ ವರಿಷ್ಠಾಧಿಕಾರಿಗಳು, ಬೀದರ ಜಿಲ್ಲೆ.