ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಜ್ಯಾಮರ್ ಕಾಟಕ್ಕೆ ಬೇಸತ್ತ ಹಳ್ಳಿಜನರು..! ಕಲಬುರಗಿ: ಕೇಂದ್ರ ಕಾರಾಗೃಹದ ಭದ್ರತೆಗಾಗಿ ಅಳವಡಿಸಿರುವ ನೆಟ್ವರ್ಕ್ ಜ್ಯಾಮರ್ ಇದೀಗ ಜೈಲಿನ ಸುತ್ತಮುತ್ತಲಿನ ಗ್ರಾಮಸ್ಥರಿಗೆ ತಲೆನೋವಾಗಿ ಪರಿಣಮಿಸಿದೆ ಎಂಬ ಆರೋಪ ಕೇಳಿಬಂದಿದೆ. ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜ್ಯಾಮರ್ನ ವ್ಯಾಪ್ತಿ ಹೆಚ್ಚಳದಿಂದ ಸಿತನೂರು, ನಂದಿಕೂರು, ಪಾಣೆಗಾಂವ್, ಶಿರನೂರು, ಖಣದಾಳ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೊಬೈಲ್ ನೆಟ್ವರ್ಕ್ ಹಾಗೂ ಇಂಟರ್ನೆಟ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಜ್ಯಾಮರ್ನ ಪರಿಣಾಮವಾಗಿ ಮೊಬೈಲ್ ಕರೆಗಳು ಸರಿಯಾಗಿ ಸಂಪರ್ಕವಾಗದೆ, ಮಾತನಾಡುವ ಸಂದರ್ಭದಲ್ಲೇ…
ಹೊಸದಿಲ್ಲಿ: ಯುಪಿಐ (UPI) ವಹಿವಾಟುಗಳ ಮೇಲೆ ಶೀಘ್ರದಲ್ಲೇ ಶುಲ್ಕ ವಿಧಿಸಲಾಗುತ್ತದೆ ಎಂಬ ವದಂತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಸಣ್ಣ ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ದೊಡ್ಡ ನಿರಾಳತೆ ಸಿಕ್ಕಂತಾಗಿದೆ. ’ಪೇಮೆಂಟ್ ಅಂಡ್ ಸೆಟಲ್ಮೆಂಟ್ ಸಿಸ್ಟಮ್ಸ್ (ತಿದ್ದುಪಡಿ) ಮಸೂದೆ, 2026′ ಹಿನ್ನೆಲೆಯಲ್ಲಿ ಯುಪಿಐ ಮೇಲೆ ‘ಮರ್ಚಂಟ್ ಡಿಸ್ಕೌಂಟ್ ರೇಟ್’ (MDR) ಶುಲ್ಕ ಜಾರಿಯಾಗಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪ್ರಸ್ತುತ ಯುಪಿಐ ವಹಿವಾಟುಗಳ ಮೇಲೆ ಯಾವುದೇ…