ಬಾಗಲಕೋಟೆ: ನಗರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಮುನ್ನೆಚ್ಚರಿಕಾ ಕ್ರಮವಾಗಿ, ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ಗಳ ಹಜಾರಿ (ಪರೇಡ್) ನಡೆಸಲಾಯಿತು.
ನವನಗರ ಪೊಲೀಸ್ ಠಾಣೆ ಆವರಣದಲ್ಲಿ ಆಯೋಜಿಸಲಾಗಿದ್ದ ಈ ರೌಡಿ ಪರೇಡ್ನಲ್ಲಿ ಠಾಣಾ ವ್ಯಾಪ್ತಿಯ ಪ್ರಮುಖ ರೌಡಿ ಶೀಟರ್ಗಳನ್ನು ಹಾಜರುಪಡಿಸಿ, ಅವರ ಪ್ರಸ್ತುತ ಚಟುವಟಿಕೆಗಳ ಕುರಿತು ಅಧಿಕಾರಿಗಳು ಕೂಲಂಕುಷವಾಗಿ ಪರಿಶೀಲನೆ ನಡೆಸಿದರು.
ಸಮಾಜದಲ್ಲಿ ಶಾಂತಿ ಪಾಲನೆ: ಸಾರ್ವಜನಿಕರಿಗೆ ತೊಂದರೆ ನೀಡದೆ, ಸಮಾಜದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಿಕೊಂಡು ಜೀವಿಸಬೇಕು.
ಅಕ್ರಮ ಚಟುವಟಿಕೆಗಳಿಗೆ ತಡೆ: ಯಾವುದೇ ರೀತಿಯ ಕಾನೂನುಬಾಹಿರ, ಸಮಾಜಘಾತುಕ ಹಾಗೂ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳಬಾರದು.
ಕಠಿಣ ಕ್ರಮದ ಎಚ್ಚರಿಕೆ: ನಿಯಮಗಳನ್ನು ಮೀರಿ ಮತ್ತೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದರೆ ಅಂತಹವರ ವಿರುದ್ಧ ಕಾನೂನು ರೀತ್ಯ ಮುಲಾಜಿಲ್ಲದೆ ಅತ್ಯಂತ ಕಠಿಣ ಕ್ರಮ ಜರುಗಿಸಲಾಗುವುದು.
ಸಾರ್ವಜನಿಕರಲ್ಲಿ ಧೈರ್ಯ ಹಾಗೂ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಮತ್ತು ಅಪರಾಧ ಕೃತ್ಯಗಳಿಗೆ ಸಂಪೂರ್ಣವಾಗಿ ತಡೆ ಹಾಕುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದ್ದು, ಮುಂಬರುವ ದಿನಗಳಲ್ಲೂ ರೌಡಿ ಶೀಟರ್ಗಳ ಚಟುವಟಿಕೆಗಳ ಮೇಲೆ ಪೊಲೀಸರು ತೀವ್ರ ನಿಗಾ ವಹಿಸಲಿದ್ದಾರೆ.