ರಾಯಚೂರು: ಬಸ್ ನಿಲ್ದಾಣದಲ್ಲಿ ಒಂಟಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿ, ಚುಡಾಯಿಸಲು ಯತ್ನಿಸಿದ ಕಾಮುಕನಿಗೆ ಮಹಿಳೆಯೊಬ್ಬರು ಸಾರ್ವಜನಿಕವಾಗಿಯೇ ಹಿಗ್ಗಾಮುಗ್ಗಾ ಥಳಿಸಿ ತಕ್ಕ ಪಾಠ ಕಲಿಸಿರುವ ಧೀಮಂತ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ಕಿರುಕುಳ ನೀಡಿದ ವ್ಯಕ್ತಿಯ ಕಣ್ಣಿಗೆ ನೇರವಾಗಿ ಖಾರದ ಪುಡಿ ಎರಚಿ, ಬಳಿಕ ಕಟ್ಟಿಗೆಯಿಂದ ಸಾರ್ವಜನಿಕವಾಗಿ ಧರ್ಮದೇಟು ನೀಡಿದ ಮಹಿಳೆಯ ಧೈರ್ಯದ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ರಾಯಚೂರು ಬಸ್ ನಿಲ್ದಾಣದ ಆವರಣದಲ್ಲಿ ಅಸಭ್ಯವಾಗಿ ವರ್ತಿಸಿ ಸಾರ್ವಜನಿಕವಾಗಿ ಮಹಿಳೆಯ ಕೈಗೆ ಸಿಕ್ಕಿಬಿದ್ದು…
ನಂಜನಗೂಡು: ಇಲ್ಲಿನ ಪ್ರಸಿದ್ಧ ನೆಸ್ಲೆ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯ ಲ್ಯಾಬ್ ಒಳಗೆ ಗುತ್ತಿಗೆ ಆಧಾರದ ಕಾರ್ಮಿಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೈರ್ಯಗೇಡಿನ ಘಟನೆ ನಡೆದಿದೆ. ಸಹೋದ್ಯೋಗಿಗಳ ನಿರಂತರ ಮಾನಸಿಕ ಕಿರುಕುಳವೇ ಈ ಸಾವಿಗೆ ಕಾರಣ ಎಂದು ಮೃತರು ಬರೆದಿಟ್ಟಿರುವ ಡೆತ್ನೋಟ್ನಿಂದ ತಿಳಿದುಬಂದಿದೆ. ನಂಜನಗೂಡು ತಾಲ್ಲೂಕಿನ ಹಂಡುವಿನಹಳ್ಳಿ ಗ್ರಾಮದ ನಿವಾಸಿ ಕುಮಾರಸ್ವಾಮಿ (48) ಆತ್ಮಹತ್ಯೆಗೆ ಶರಣಾದ ದುರ್ದೈವಿ ಕಾರ್ಮಿಕ. ಮೂಲತಃ ನಂಜನಗೂಡು ತಾಲ್ಲೂಕಿನ ಕಪ್ಪಸೋಗೆ ಗ್ರಾಮದವರಾದ ಕುಮಾರಸ್ವಾಮಿ ಅವರು ಸದ್ಯ ಪತ್ನಿಯ ತವರೂರಾದ ಹಂಡುವಿನಹಳ್ಳಿ ಗ್ರಾಮದಲ್ಲಿ…