ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ವಿವಿಧೆಡೆ ಅಕ್ರಮವಾಗಿ ನಡೆಯುತ್ತಿದ್ದ ಜೂಜಾಟದ ಅಡ್ಡೆಗಳ ಮೇಲೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಏಕಕಾಲದಲ್ಲಿ ಭರ್ಜರಿ ದಾಳಿ ನಡೆಸಿದ್ದು, 49 ಮಂದಿ ಜೂಜುಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿ ವೇಳೆ ಜೂಜಾಟಕ್ಕೆ ಪಣವಾಗಿಟ್ಟಿದ್ದ ₹3.78 ಲಕ್ಷ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಕೊಳ್ಳೇಗಾಲ ತಾಲೂಕಿನಾದ್ಯಂತ ಪಾರ್ಟಿ ಹಾಲ್ಗಳಲ್ಲಿ ಕಾನೂನುಬಾಹಿರವಾಗಿ ಇಸ್ಪೀಟ್ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಗ್ರಾಮಾಂತರ ಪೊಲೀಸರು ಮೂರು ಪ್ರತ್ಯೇಕ ಸ್ಥಳಗಳ ಮೇಲೆ ದಾಳಿ ಸಂಘಟಿಸಿದ್ದರು. ಕೊಳ್ಳೇಗಾಲ…
ಮೈಸೂರು: ಯುವಕನೊಬ್ಬನ ನಿರಂತರ ಬ್ಲ್ಯಾಕ್ಮೇಲ್ ಹಾಗೂ ಮಾನಸಿಕ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ಮನಕಲಕುವ ಘಟನೆ ಮೈಸೂರು ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿಗಳಾದ ರಕ್ಷಿತಾ, ಆಕೆಯ ತಾಯಿ ನಾಗರತ್ನ ಹಾಗೂ ತಂದೆ ಶಿವಣ್ಣ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ. ಸಾವಿಗೂ ಮುನ್ನ ಮೂವರೂ ಸೇರಿ ತಮ್ಮ ಸಾವಿಗೆ ಕಾರಣವಾದ ಕಿರಾತಕನ ಹೆಸರನ್ನು ಡೆತ್ನೋಟ್ನಲ್ಲಿ ಬರೆದಿಟ್ಟಿದ್ದಾರೆ. ಮೃತ ರಕ್ಷಿತಾಗೆ ಇತ್ತೀಚೆಗಷ್ಟೇ ಬೇರೆ ಯುವಕನೊಂದಿಗೆ ಮದುವೆ ನಿಶ್ಚಯವಾಗಿತ್ತು….