ಅಪ್ರಾಪ್ತ ವಯಸ್ಕರು (Minor) ರಸ್ತೆಗಿಳಿದು ವಾಹನ ಚಾಲನೆ ಮಾಡುವುದು ಕಾನೂನುಬಾಹಿರ ಮತ್ತು ಕಠಿಣ ಶಿಕ್ಷಾರ್ಹ ಅಪರಾಧವಾಗಿದ್ದು, ಪೋಷಕರು ಹಾಗೂ ಸಾರ್ವಜನಿಕರು ಈ ನಿಟ್ಟಿನಲ್ಲಿ ತೀವ್ರ ಎಚ್ಚರಿಕೆ ವಹಿಸುವಂತೆ ಆನೇಕಲ್ ಪೊಲೀಸ್ ಠಾಣೆಯು ಕಡಕ್ ಸೂಚನೆ ನೀಡಿದೆ. ಮಕ್ಕಳ ಸುರಕ್ಷತೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಆನೇಕಲ್ ಪೊಲೀಸರು ವಿಶೇಷ ಜಾಗೃತಿ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಮೋಟಾರ್ ವಾಹನ ಕಾಯ್ದೆ, 1988ರ (2019ರ ತಿದ್ದುಪಡಿ ಅನ್ವಯ) ಪ್ರಕಾರ, ಕಾನೂನುಬದ್ಧ ವಯಸ್ಸು (Driving Age) ತಲುಪುವ ಮುನ್ನವೇ ಅಪ್ರಾಪ್ತರು ವಾಹನ ಚಾಲನೆ…
ಚಾಮರಾಜನಗರ: ಜಿಲ್ಲೆಯ ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿದ್ದ ನಾಮಫಲಕಕ್ಕೆ ಕಿಡಿಗೇಡಿಗಳು ಸಗಣಿ ಎರಚಿ ವಿಕೃತವಾಗಿ ಅಪಮಾನ ಮಾಡಿರುವ ಘಟನೆ ಸಂಭವಿಸಿದೆ. ಈ ಹೀನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆಯೇ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ದಲಿತ ಮುಖಂಡರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಕೋಮು ಸೌಹಾರ್ದತೆ ಕೆಡಿಸಿ, ಶಾಂತಿ ಭಂಗ ತರಲು ಯತ್ನಿಸಿರುವ ಈ ಕಿಡಿಗೇಡಿಗಳನ್ನು ವಿಳಂಬ ಮಾಡದೆ ತಕ್ಷಣವೇ ಬಂಧಿಸಿ ಕಠಿಣ ಕಾನೂನು…