ಚಿನ್ನದ ಆಭರಣಕ್ಕಾಗಿ 80 ವರ್ಷದ ವೃದ್ಧೆಯನ್ನು ಭೀಕರವಾಗಿ ಹತ್ಯೆ ಮಾಡಿ, ಆಕೆಯ ಎರಡೂ ಕಿವಿಗಳನ್ನು ಕತ್ತರಿಸಿ ಬಂಗಾರದ ಓಲೆಗಳನ್ನು ದೋಚಿರುವ ಅತ್ಯಂತ ಅಮಾನುಷ ಹಾಗೂ ಕ್ರೂರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬಸವನಪುರ ಗ್ರಾಮದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದ ನಿವಾಸಿಯಾದ ಸುಬ್ಬಮ್ಮ (80) ಕೊಲೆಯಾದ ದುರ್ದೈವಿ. ಇವರು ಇತ್ತೀಚೆಗಷ್ಟೇ ಗೌರಿಬಿದನೂರು ತಾಲೂಕಿನ ಬಸವನಪುರ ಗ್ರಾಮದಲ್ಲಿರುವ ತಮ್ಮ ಮಗಳ ಮನೆಗೆ ಬಂದಿದ್ದರು. ಮಗಳು ಕೆಲಸಕ್ಕೆ ತೆರಳಿದ್ದರಿಂದ ವೃದ್ಧೆ ಸುಬ್ಬಮ್ಮ ಅವರು ಮನೆಯಲ್ಲಿ ಒಂಟಿಯಾಗಿದ್ದರು….
ನ್ಯಾಯದಾನ ಮಾಡುವ ಪವಿತ್ರ ಸ್ಥಳ ಎಂದೇ ಪರಿಗಣಿಸಲ್ಪಡುವ ಬೆಂಗಳೂರು ಹೊರವಲಯದ ಆನೇಕಲ್ ನ್ಯಾಯಾಲಯ ಸಂಕೀರ್ಣದಿಂದ ಬರೊಬ್ಬರಿ 28 ಪ್ರಮುಖ ಪ್ರಕರಣಗಳ ಕಡತಗಳು (Case Files) ನಿಗೂಢವಾಗಿ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ದೂರಿಗೆ ಸಂಬಂಧಿಸಿದಂತೆ ಈಗ ಆನೇಕಲ್ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಕಳ್ಳತನ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯಾಯಾಂಗ ಅಧಿಕಾರಿ ಎಂ. ಮಾರುಸ್ವಾಮಿ ಅವರು ಸೋಮವಾರ ಆನೇಕಲ್ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ನ್ಯಾಯಾಲಯದ…