ಚಾಮರಾಜನಗರ: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ (DD) ಹೆಚ್.ಆರ್.ಸುರೇಶ್ ಅವರನ್ನು ಕರ್ತವ್ಯ ಲೋಪ ಹಾಗೂ ಆಡಳಿತಾತ್ಮಕ ಉದಾಸೀನತೆಯ ಆರೋಪದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವಾಲಯದ ಕಾರ್ಯದರ್ಶಿಗಳಾದ ಎಂ.ಎಸ್.ರಶ್ಮಿ ಅವರು ಈ ಅಮಾನತು ಆದೇಶವನ್ನು ಹೊರಡಿಸಿದ್ದಾರೆ. ಉಪ ನಿರ್ದೇಶಕ ಹೆಚ್.ಆರ್.ಸುರೇಶ್ ಅವರ ವಿರುದ್ಧ ಸರ್ಕಾರದ ನಿಯಮಾವಳಿಗಳ ಉಲ್ಲಂಘನೆ ಸೇರಿದಂತೆ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಮಾದರಿಯ ಮನೆ ಕಳ್ಳತನ ಪ್ರಕರಣವನ್ನು ಅತ್ಯಂತ ಚಾಣಾಕ್ಷತನದಿಂದ ಭೇದಿಸಿರುವ ಪೊಲೀಸರು, ಬಿಹಾರ ಮೂಲದ ಇಬ್ಬರು ಕುಖ್ಯಾತ ಅಂತರರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಒಟ್ಟು 7.11 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಹಣ ಹಾಗೂ ಕಳವು ಮಾಡಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಕಳೆದ ಜೂನ್ 15 ರಂದು ತಾಲೂಕಿನ ನಿವಾಸಿಯಾದ ಸರಳಾ ಚಂದ್ರಶೇಖರ್ ಎಂಬುವರ ಮನೆಯ ಬೀಗ ಮುರಿದಿದ್ದ ಕಳ್ಳರು,…