ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕ ಎರಡು ಕಾರ್ಯಾಚರಣೆಗಳನ್ನು ನಡೆಸಿ ಬರೋಬ್ಬರಿ 3.12 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಚಿನ್ನ ಹಾಗೂ ಮಾದಕ ವಸ್ತುವನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಿದೇಶಗಳಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಈ ಕಳ್ಳಸಾಗಣೆ ಜಾಲ ಬಯಲಾಗಿದೆ. ದುಬೈನಿಂದ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕನೊಬ್ಬನ ನಡವಳಿಕೆಯ ಮೇಲೆ ಅನುಮಾನಗೊಂಡ ಅಧಿಕಾರಿಗಳು ಆತನನ್ನು ತಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ…
ವೈದ್ಯಕೀಯ ಶಿಕ್ಷಣ ಹಾಗೂ ಸಂಶೋಧನೆಗಾಗಿ ದಾನವಾಗಿ ಬರುವ ಮೃತದೇಹಗಳ (ಶವಗಳ) ಖಾಸಗಿ ಅಂಗಗಳ ಬಗ್ಗೆ ಕಾಮಿಡಿ ಶೋ ಒಂದರಲ್ಲಿ ಅತ್ಯಂತ ವಿವಾದಾತ್ಮಕ ಹಾಗೂ ಅವಹೇಳನಕಾರಿ ಕಾಮೆಂಟ್ ಮಾಡಿ ಭಾರಿ ಸಾರ್ವಜನಿಕ ಆಕ್ರೋಶಕ್ಕೆ ಈಡಾಗಿದ್ದ ಮುಂಬೈನ ಪ್ರಸಿದ್ಧ ಕೆಇಎಂ (KEM) ಆಸ್ಪತ್ರೆಯ ವೈದ್ಯೆ ಸೇಜಲ್ ಪವಾರ್ ಕೊನೆಗೂ ಮಣಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾದ ಬೆನ್ನಲ್ಲೇ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಹಾಸ್ಯನಟ ಪ್ರಣೀತ್ ಮೋರೆ ಅವರ ಸ್ಟ್ಯಾಂಡ್ ಅಪ್ ಕಾಮಿಡಿ ಶೋ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿ…