ಬಾಗಲಕೋಟೆ: ಸರ್ಕಾರದ ಸಹಾಯಧನದ ಮಂಜೂರಾತಿ ಆದೇಶ ನೀಡಲು ಹಾಗೂ ವಾಹನದ ಜಿಪಿಎಸ್ ಫೋಟೊ ಮಾಡಲು ₹3 ಸಾವಿರ ಲಂಚ ಪಡೆಯುತ್ತಿದ್ದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಪ್ರಥಮ ದರ್ಜೆ ಸಹಾಯಕ (FDA) ಗುರುನಾಥ ಎಂ. ಮಸಳಿ ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಮುಧೋಳ ತಾಲ್ಲೂಕಿನ ಜಾಲಿಬೇರಿ ಗ್ರಾಮದ ಬಸವರಾಜ ಗೋವಿಂದಪ್ಪ ಮೆಟಗುಡ್ಡ ಅವರು ನೀಡಿದ ದೂರಿನ ಮೇರೆಗೆ ಈ ದಾಳಿ ನಡೆದಿದೆ. ಪ್ರಕರಣದ ಹಿನ್ನೆಲೆ: ಫಿರ್ಯಾದಿದಾರರಿಗೆ ಕರ್ನಾಟಕ…
ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯದ ವಿವಿಧ ಭಾಗಗಳಲ್ಲಿ ರೈಲ್ವೆ ರಕ್ಷಣೆ ಪಡೆ (ಆರ್ಪಿಎಫ್) ಪೊಲೀಸರು ನಡೆಸಿದ ‘ಆಪರೇಷನ್ ನಾರ್ಕೊ’ (Operation NARCOS) ಕಾರ್ಯಾಚರಣೆಯಲ್ಲಿ ಸುಮಾರು 12.5 ಕೋಟಿ ರೂಪಾಯಿ ಮೌಲ್ಯದ 127.5 ಕೆಜಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸರಣಿ ಕಾರ್ಯಾಚರಣೆಯಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು, 6 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಕಾರ್ಯಾಚರಣೆಗಳ ವಿವರ: ಕೋಟಿ ಮೌಲ್ಯದ ಆಂಫೆಟಮೈನ್ ಜಪ್ತಿ: ಕಾರ್ಯಾಚರಣೆಯೊಂದರಲ್ಲಿ ಮೂವರು ಆರೋಪಿಗಳನ್ನು ಬಂಧಿಸಿರುವ ಆರ್ಪಿಎಫ್ ಪೊಲೀಸರು,…