ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ರಾಮತೀರ್ಥ ಹೊಸಕೊಪ್ಪ ಗ್ರಾಮದಲ್ಲಿ ನಡೆದ ೨೦ ವರ್ಷದ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಅನುಪಮಾ ಸಾವಿನ ಪ್ರಕರಣಕ್ಕೆ ಇದೀಗ ಸ್ಫೋಟಕ ತಿರುವು ಸಿಕ್ಕಿದ್ದು, ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಮನೆಯ ಎದುರಿನ ನಿವಾಸಿಯಾಗಿರುವ ಅಕ್ಷಯ ಎಂಬ ವಿವಾಹಿತ ಯುವಕನ ವಿರುದ್ಧ ಮೃತ ಅನುಪಮಾ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಕ್ಷಯ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡುತ್ತಿದ್ದ, ಖಾಸಗಿ ಅಂಗಗಳನ್ನು ಸ್ಪರ್ಶಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಅಲ್ಲದೆ…
ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಹೆದ್ದಾರಿಯಲ್ಲೇ ಯುವಕರ ಪಡೆ ಡೆಡ್ಲಿ ಬೈಕ್ ವ್ಹೀಲಿಂಗ್ ನಡೆಸಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಿಗ್ಗೆಯಿಂದಲೇ ಗಿಜಿಗುಡುವ ಬಿಡುವಿಲ್ಲದ ಹೊಸೂರು ಮುಖ್ಯರಸ್ತೆಯಲ್ಲಿ, ಅದೂ ನೇರವಾಗಿ ಹೆಬ್ಬಗೋಡಿ ಪೊಲೀಸ್ ಠಾಣೆಯ ಮುಂಭಾಗದಲ್ಲಿಯೇ ಈ ಪುಂಡಾಟಿಕೆ ನಡೆದಿದೆ. ನಂಬರ್ ಪ್ಲೇಟ್ ಇಲ್ಲದ ಬೈಕ್ನಲ್ಲಿ ಜೀವದ ಹಂಗು ತೊರೆದು ಅಪಾಯಕಾರಿ ರೀತಿಯಲ್ಲಿ ವ್ಹೀಲಿಂಗ್ ನಡೆಸುತ್ತಿರುವ ದೃಶ್ಯಗಳನ್ನು ಹಿಂದಿನಿಂದ ಬಂದ ಕಾರು ಚಾಲಕರೊಬ್ಬರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ. ಪ್ರಸ್ತುತ ಈ…