ನೆಲಮಂಗಲ: ಪತ್ನಿ ಮತ್ತು ನವಜಾತ ಮಗುವನ್ನು ನೋಡಿಕೊಂಡು ಮನೆಗೆ ಮರಳುತ್ತಿದ್ದ ಯುವಕನೊಬ್ಬ ಭೀಕರ ಹಿಟ್ ಆ್ಯಂಡ್ ರನ್ ಅಪಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹುಸ್ಕೂರು ರಸ್ತೆಯಲ್ಲಿ ಸಂಭವಿಸಿದೆ. ಘಟನೆಯ ವಿವರ ಮೃತ ಯುವಕ: ದಾಸನಪುರ ತಾಲೂಕಿನ ಮುನಿಚಪ್ಪನಪಾಳ್ಯ ನಿವಾಸಿ ಅಭಿಷೇಕ್ (27). ಹಿನ್ನೆಲೆ: ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಅಭಿಷೇಕ್, ಚಿಕ್ಕಬೆಳವಂಗಲದಲ್ಲಿದ್ದ ಪತ್ನಿಯ ಬಾಣಂತನ ಹಾಗೂ ಮಗುವನ್ನು ನೋಡಿ ದಾಸನಪುರದ ತಮ್ಮ ಮನೆಗೆ ಬೈಕ್ನಲ್ಲಿ ವಾಪಸ್ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ….
ಬಾಳಿನಲ್ಲಿ ಹೊಸ ಅಧ್ಯಾಯ ಆರಂಭಿಸಿ ಒಟ್ಟಾಗಿ ಜೀವನ ನಡೆಸಬೇಕಿದ್ದ ಯುವ ಜೋಡಿಯೊಂದು ಕೆಲವೇ ಗಂಟೆಗಳ ಅಂತರದಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿರುವ ಘೋರ ಘಟನೆ ವರದಿಯಾಗಿದೆ. ವಿಧಿಯ ಕ್ರೂರ ಆಟಕ್ಕೆ ನಿಶ್ಚಿತಾರ್ಥವಾಗಿದ್ದ ಬ್ಯಾಂಕ್ ಉದ್ಯೋಗಿಗಳಿಬ್ಬರು ಬಲಿಯಾಗಿದ್ದು, ಕುಟುಂಬಸ್ಥರನ್ನು ತೀವ್ರ ಶೋಕಸಾಗರದಲ್ಲಿ ಮುಳುಗಿಸಿದೆ. ಮದುವೆ ನಿಶ್ಚಯವಾಗಿದ್ದ ಜೋಡಿ: ಕಾಸರಗೋಡಿನ ಪಳ್ಳಿಕ್ಕರ ಮೂಲದ ಪಿ. ಅನುಶ್ರೀ ಹಾಗೂ ಕಣ್ಣೂರು ಮೂಲದ ವಿ. ಅಮಲ್ ಮೃತಪಟ್ಟ ದುರ್ದೈವಿಗಳು. ಇಬ್ಬರೂ ಬ್ಯಾಂಕ್ ಉದ್ಯೋಗಿಗಳಾಗಿದ್ದು, ಎರಡೂ ಕುಟುಂಬಗಳ ಸಮ್ಮತಿಯೊಂದಿಗೆ ಇತ್ತೀಚೆಗಷ್ಟೇ ವಿಜೃಂಭಣೆಯಿಂದ ನಿಶ್ಚಿತಾರ್ಥ ನೆರವೇರಿತ್ತು….