ಹಾಸನ: ತಾಲೂಕಿನ ಗಾಡೇನಹಳ್ಳಿಯಲ್ಲಿರುವ ಕೃಷಿ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ನಲ್ಲಿ ರಾತ್ರಿ ನೀಡಿದ ಆಹಾರದಲ್ಲಿ ಹಲ್ಲಿ ಬಿದ್ದಿದ್ದು, ಅದನ್ನು ಸೇವಿಸಿದ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಫುಡ್ ಪಾಯಿಸನ್ (ಆಹಾರ ವಿಷಪೂರಿತ) ಆಗಿ ತೀವ್ರ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ನಿನ್ನೆ ರಾತ್ರಿ ಎಂದಿನಂತೆ ವಿದ್ಯಾರ್ಥಿನಿಯರು ಹಾಸ್ಟೆಲ್ನಲ್ಲಿ ಊಟ ಮಾಡುತ್ತಿದ್ದಾಗ, ಆಹಾರದಲ್ಲಿ ಹಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಅಷ್ಟರಗಾಗಲೇ ಅದೇ ಆಹಾರವನ್ನು ಸೇವಿಸಿದ್ದ ಹಲವು ವಿದ್ಯಾರ್ಥಿನಿಯರಲ್ಲಿ ವಾಂತಿ, ತಲೆಸುತ್ತು ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಕಾಲೇಜು ಸಿಬ್ಬಂದಿ ಅಸ್ವಸ್ಥಗೊಂಡ 15ಕ್ಕೂ…
ರಾಯಚೂರು: ಬಸ್ ನಿಲ್ದಾಣದಲ್ಲಿ ಒಂಟಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿ, ಚುಡಾಯಿಸಲು ಯತ್ನಿಸಿದ ಕಾಮುಕನಿಗೆ ಮಹಿಳೆಯೊಬ್ಬರು ಸಾರ್ವಜನಿಕವಾಗಿಯೇ ಹಿಗ್ಗಾಮುಗ್ಗಾ ಥಳಿಸಿ ತಕ್ಕ ಪಾಠ ಕಲಿಸಿರುವ ಧೀಮಂತ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ಕಿರುಕುಳ ನೀಡಿದ ವ್ಯಕ್ತಿಯ ಕಣ್ಣಿಗೆ ನೇರವಾಗಿ ಖಾರದ ಪುಡಿ ಎರಚಿ, ಬಳಿಕ ಕಟ್ಟಿಗೆಯಿಂದ ಸಾರ್ವಜನಿಕವಾಗಿ ಧರ್ಮದೇಟು ನೀಡಿದ ಮಹಿಳೆಯ ಧೈರ್ಯದ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ರಾಯಚೂರು ಬಸ್ ನಿಲ್ದಾಣದ ಆವರಣದಲ್ಲಿ ಅಸಭ್ಯವಾಗಿ ವರ್ತಿಸಿ ಸಾರ್ವಜನಿಕವಾಗಿ ಮಹಿಳೆಯ ಕೈಗೆ ಸಿಕ್ಕಿಬಿದ್ದು…