ನವದೆಹಲಿ: ಕ್ರೈಮ್ ಮತ್ತು ಸಸ್ಪೆನ್ಸ್ ವೆಬ್ ಸಿರೀಸ್ ನೋಡಿ ಪ್ರೇರೇಪಿತಗೊಂಡು ತನ್ನ ಪತ್ನಿಯನ್ನೇ ಭೀಕರವಾಗಿ ಕೊಲೆ ಮಾಡಿದ್ದ ಸಾಫ್ಟ್ವೇರ್ ಎಂಜಿನಿಯರ್ ಒಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಕೊಲೆಯ ಬಳಿಕ ಆಕಸ್ಮಿಕ ಸಾವು ಎಂದು ಬಿಂಬಿಸಲು ಯತ್ನಿಸಿ, ಲಕ್ಷಾಂತರ ರೂಪಾಯಿ ಹಣದೊಂದಿಗೆ ಪರಾರಿಯಾಗಿದ್ದ ಆರೋಪಿಯ ಕರಾಳ ಸಂಚನ್ನು ಪೊಲೀಸರು ಯಶಸ್ವಿಯಾಗಿ ಬಯಲಿಗೆಳೆದಿದ್ದಾರೆ. ಬಂಧಿತ ಆರೋಪಿ ಟೆಕ್ಕಿಯು ಪ್ರಸಿದ್ಧ ‘ದಿ ಸ್ಟೇರ್ಕೇಸ್’ (The Staircase) ಎಂಬ ವೆಬ್ ಸಿರೀಸ್ನಿಂದ ಪ್ರೇರಣೆ ಪಡೆದು ಈ ಭೀಕರ ಕೃತ್ಯಕ್ಕೆ ಯೋಜನೆ ರೂಪಿಸಿದ್ದ….
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ಪೇಟೆಯಲ್ಲಿ ಹಾಡಹಗಲೇ ಭೀಕರ ದರೋಡೆ ಯತ್ನ ನಡೆದಿದ್ದು, ಬಂದೂಕುಧಾರಿ ದುಷ್ಕರ್ಮಿಗಳು ಚಿನ್ನದ ಅಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ. ದಾಬಸ್ಪೇಟೆಯ ಪ್ರಸಿದ್ಧ ‘ಪ್ರೇಮ್ ಶಿವ ಜೂವೆಲರ್ಸ್’ ಅಂಗಡಿಯಲ್ಲಿ ಈ ಕೃತ್ಯ ನಡೆದಿದ್ದು, ಮಾಲೀಕ ಕುನ್ನಾರಾಮ್ ಅವರ ಬಲಗಾಲಿಗೆ ಗುಂಡೇಟು ಬಿದ್ದಿದೆ. ಕಾರಿನಲ್ಲಿ ಬಂದಿದ್ದ ಸಶಸ್ತ್ರ ದುಷ್ಕರ್ಮಿಗಳ ತಂಡ ಏಕಾಏಕಿ ಪ್ರೇಮ್ ಶಿವ ಜೂವೆಲರ್ಸ್ ಅಂಗಡಿಗೆ ನುಗ್ಗಿ ಚಿನ್ನಾಭರಣಗಳನ್ನು ದೋಚಲು…