ಶಿಗ್ಗಾಂವ: ಪಟ್ಟಣದಲ್ಲಿ ಸುಸಜ್ಜಿತ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ನಿರ್ಮಾಣ ಮಾಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಶಿಗ್ಗಾಂವ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಮತ್ತೊಮ್ಮೆ ಮನವಿ ಪತ್ರ ಸಲ್ಲಿಸಿದ್ದಾರೆ. ಸುಮಾರು 25 ದಿನಗಳ ಹಿಂದೆಯೇ ಈ ಕುರಿತು ಲಿಖಿತ ಮನವಿ ನೀಡಲಾಗಿದ್ದರೂ, ಸ್ಥಳೀಯ ಆಡಳಿತದಿಂದ ಯಾವುದೇ ಸೂಕ್ತ ಸ್ಪಂದನೆ ಅಥವಾ ಕ್ರಮಗಳು ಜರುಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಮುಖಂಡರು, ಅಧಿಕಾರಿಗಳನ್ನು ಮತ್ತೆ ಭೇಟಿ ಮಾಡಿ ಮನವಿ ಪುನರುಚ್ಚರಿಸಿದ್ದು, ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳುವಂತೆ ತೀವ್ರ ಒತ್ತಾಯ…
ವಿಜಯಪುರ – ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅವ್ಯವಸ್ಥೆ ಖಂಡಿಸಿ ಹಾಗೂ ಮರುಪರೀಕ್ಷೆ ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಇಂದು ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳದಲ್ಲಿ ಸರ್ಕಾರದ ವಿರುದ್ಧ ಪೋಸ್ಟರ್ಗಳನ್ನು ಪ್ರದರ್ಶಿಸಲು ಕಾರ್ಯಕರ್ತರು ಮುಂದಾ ಗುತ್ತಿದ್ದಂತೆ ಪೊಲೀಸರು ಅವುಗಳನ್ನು ಕಸಿದುಕೊಂಡರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆಯಿತು. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದರು. ಈ…