ಹಾವೇರಿ: ಕಳ್ಳತನಕ್ಕೊಳಗಾದ ಚಿನ್ನಾಭರಣ, ಮೊಬೈಲ್ ಹಾಗೂ ವಾಹನಗಳು ಮರಳಿ ಸಿಗುವುದೇ ಅನುಮಾನ ಎಂಬ ಸಾರ್ವಜನಿಕರ ಆತಂಕಕ್ಕೆ ಹಾವೇರಿ ಜಿಲ್ಲಾ ಪೊಲೀಸರು ಕಾರ್ಯಕ್ಷಮತೆಯ ಮೂಲಕ ವಿಶ್ವಾಸದ ಉತ್ತರ ನೀಡಿದ್ದಾರೆ. ವಿವಿಧ ಕಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿ, ಬರೋಬ್ಬರಿ ₹2 ಕೋಟಿ 30 ಲಕ್ಷಕ್ಕೂ ಅಧಿಕ ಮೌಲ್ಯದ ಕಳುವಾದ ಸ್ವತ್ತನ್ನು ಪತ್ತೆಹಚ್ಚಿ ಮೂಲ ಮಾಲೀಕರಿಗೆ ಹಸ್ತಾಂತರಿಸುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ‘ಪ್ರಾಪರ್ಟಿ…
ಬ್ಯಾಡಗಿ: ಪಟ್ಟಣದ ವೈಭವಲಕ್ಷ್ಮಿ ಬಡಾವಣೆ ಹಾಗೂ ಛತ್ರ ರಸ್ತೆಯ ಸಮೀಪ ಅಪರಿಚಿತ ವ್ಯಕ್ತಿಗಳಿಬ್ಬರು ಮಕ್ಕಳಿಗೆ ಚಾಕೊಲೇಟ್ ಹಾಗೂ ಚಿಪ್ಸ್ ನೀಡುವ ಆಮಿಷ ಒಡ್ಡಿ ಮಾತಿಗೆಳೆಯಲು ಯತ್ನಿಸಿದ ಘಟನೆ ವರದಿಯಾಗಿದ್ದು, ಸಾರ್ವಜನಿಕರು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಇತ್ತೀಚೆಗೆ ನಾಡಿನಾದ್ಯಂತ ಮಕ್ಕಳ ಅಪಹರಣ ಪ್ರಕರಣಗಳ ಕುರಿತು ವದಂತಿ ಹಾಗೂ ಘಟನೆಗಳು ವರದಿಯಾಗುತ್ತಿರುವ ಬೆನ್ನಲ್ಲೇ, ಬ್ಯಾಡಗಿಯಲ್ಲಿ ಈ ಘಟನೆ ಸಂಭವಿಸಿದೆ. ರಸ್ತೆಯಲ್ಲಿ ಆಟವಾಡುತ್ತಿದ್ದ ಹಾಗೂ ಓಡಾಡುತ್ತಿದ್ದ ಮಕ್ಕಳಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಚಾಕೊಲೇಟ್ ಮತ್ತು ಚಿಪ್ಸ್ ನೀಡಿ…