ಬೀದರ್: ಕರ್ನಾಟಕ ಮತ್ತು ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ, ದರೋಡೆ ಹಾಗೂ ಸುಲಿಗೆಯಂತಹ 55ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಕುಖ್ಯಾತ ಅಂತರರಾಜ್ಯ ರೂಢಿಗತ ಕಳ್ಳರನ್ನು ಹುಮನಾಬಾದ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಸುಮಾರು 54,74,000 ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ವಿವರ: ಬಂಗಾರದ ಆಭರಣಗಳು: 28.5 ತೊಲೆ (ಅಂದಾಜು ಮೌಲ್ಯ 42,75,000 ರೂ.) ಬೆಳ್ಳಿಯ ಆಭರಣಗಳು: 22 ತೊಲೆ (ಅಂದಾಜು…
ಜಮಖಂಡಿ / ಬಾಗಲಕೋಟೆ: ಸರ್ಕಾರಿ ಸೇವೆಯಿಂದ ನಿವೃತ್ತರಾದ ನೌಕರರೊಬ್ಬರಿಗೆ ಬರಬೇಕಿದ್ದ ಹಣವನ್ನು ಬಿಡುಗಡೆ ಮಾಡಲು ಶೇ. 50 ರಷ್ಟು ಕಮಿಷನ್ ಕೇಳಿ, ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಸರ್ಕಾರಿ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲೂಕು ಖಜಾನೆ ಅಧಿಕಾರಿ ಎಸ್. ಎಸ್ ಬಿರಾದಾರ್ ಹಾಗೂ ಪ್ರಥಮ ದರ್ಜೆ ಸಹಾಯಕ (FDA) ವಿನಾಯಕ್ ಹೊನವಾಡ ಬಂಧಿತ ಅಧಿಕಾರಿಗಳು. ನಿವೃತ್ತ ನೌಕರರೊಬ್ಬರಿಗೆ ಸರ್ಕಾರದಿಂದ ಬರಬೇಕಿದ್ದ 1,42,900 ರೂ. ಹಣವನ್ನು ಬಿಡುಗಡೆ ಮಾಡಲು ಈ ಅಧಿಕಾರಿಗಳು ಕಮಿಷನ್ ಬೇಡಿಕೆ…