ಬೀದರ್: ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಕುಂದು-ಕೊರತೆಗಳ ಕುರಿತು ಪ್ರಮುಖ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಐ.ಪಿ.ಎಸ್. ಅವರು, ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆ ಹಾಗೂ ಕುಂದು-ಕೊರತೆಗಳನ್ನು ಆಲಿಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ನೀಡಿದ ದೂರುಗಳು, ಮಾಹಿತಿ ಮತ್ತು ಅಮೂಲ್ಯ ಸಲಹೆಗಳನ್ನು ಅತ್ಯಂತ ಸಕಾರಾತ್ಮಕವಾಗಿ ಸ್ವೀಕರಿಸಲಾಯಿತು….
ನಂಜನಗೂಡು: ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ “ಡ್ರಗ್ಸ್ ಫ್ರೀ ಕರ್ನಾಟಕ” ಅಭಿಯಾನದ ಅಂಗವಾಗಿ ಮಾದಕ ವಸ್ತುಗಳ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕರಾದ ಶ್ರೀ ದರ್ಶನ್ ಧ್ರುವನಾರಾಯಣ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ (SP) ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಚಲನಚಿತ್ರ ನಟ ಧನ್ವೀರ್ ಗೌಡ ಹಾಗೂ ನಟಿ ಅಶ್ವಿನಿ ಅವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ಗಂಭೀರ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ ಸಂದೇಶ…