ಚಿಕ್ಕೋಡಿ/ಸದಲಗಾ: ಜಾತ್ರೆಗೆ ಹೋಗುವ ಸಣ್ಣ ವಿಚಾರವಾಗಿ ಗಂಡ-ಹೆಂಡತಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಮನನೊಂದ ಪತ್ನಿಯೊಬ್ಬಳು ದೂದಗಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ. ನದಿಗೆ ಹಾರಿದ ದುರ್ಬಲ ಮನಸ್ಸಿನ ಮಹಿಳೆಯನ್ನು ಮಂಜುಳಾ ವಂಜೀರೆ (23) ಎಂದು ಗುರುತಿಸಲಾಗಿದೆ. ಸ್ಥಳೀಯವಾಗಿ ನಡೆಯುತ್ತಿದ್ದ ಜಾತ್ರೆಗೆ ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಜುಳಾ ಹಾಗೂ ಆಕೆಯ ಪತಿ ಅನಿಲ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಜಗಳದಿಂದ ತೀವ್ರ…
ಬೀದರ: ಜಿಲ್ಲೆಯಲ್ಲಿ ಜೂಜು ಮತ್ತು ಅಕ್ರಮ ಚಟುವಟಿಕೆಗಳ ತಡೆಗೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಮಂಠಾಳ ಪೊಲೀಸ್ ಠಾಣಾ ವ್ಯಾಪ್ತಿಯ ಉಜಳಂಬ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಮಟಕಾ ಜೂಜಾಟದ ಮೇಲೆ ಪೊಲೀಸರು ಯಶಸ್ವಿ ದಾಳಿ ನಡೆಸಿದ್ದಾರೆ. ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಪ್ರದೀಪ್ ಗುಂಟಿ (ಐ.ಪಿ.ಎಸ್) ರವರ ನೇರ ಮಾರ್ಗದರ್ಶನ ಹಾಗೂ ನಿರ್ದೇಶನದಂತೆ ಈ ದಾಳಿ ನಡೆದಿದೆ. ಉಜಳಂಬ ಗ್ರಾಮದ ಸಾರ್ವಜನಿಕ ಸ್ಥಳವೊಂದರಲ್ಲಿ ವ್ಯಕ್ತಿಯೊಬ್ಬ ಮಟಕಾ ಜೂಜಾಟದಲ್ಲಿ ತೊಡಗಿರುವ ಕುರಿತು ಖಚಿತ ಮಾಹಿತಿ…