ಹುಣಸಗಿ: ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಹುಣಸಗಿ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿ ಆತನಿಂದ 73 ಗ್ರಾಂ ಬಂಗಾರ ಹಾಗೂ ₹2 ಲಕ್ಷ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಸಿದ್ದಾಪುರ (ಬಿ) ಗ್ರಾಮದ ದೇವಪ್ಪ ಯಮನಪ್ಪ ಹುಲಕೇರಿ ಬಂಧಿತ ಆರೋಪಿ. ಸಿದ್ದಾಪುರ (ಬಿ) ಗ್ರಾಮದ ಯಲ್ಲಪ್ಪ ಬಸಪ್ಪ ಹುಲಕೇರಿ ಎಂಬುವರ ಜಮೀನಿನಲ್ಲಿರುವ ಮನೆಗೆ ಏಪ್ರಿಲ್ 17ರ ರಾತ್ರಿ 9.30ರ ಸುಮಾರಿಗೆ ನುಗ್ಗಿದ್ದ ಅಪರಿಚಿತ ಕಳ್ಳರು, ಮನೆಯ ಬೀಗ…
ಕೆಜಿಎಫ್: ಸಾರ್ವಜನಿಕರ ಸುರಕ್ಷತೆ ಹಾಗೂ ಅಪರಾಧ ನಿಯಂತ್ರಣದ ಉದ್ದೇಶದಿಂದ ಕೆಜಿಎಫ್ ಉಪವಿಭಾಗದ ಡಿವೈಎಸ್ಪಿ ಅವರ ನೇತೃತ್ವದಲ್ಲಿ ಮಾರಿಕುಪ್ಪಂ ರೈಲು ನಿಲ್ದಾಣದಲ್ಲಿ ರೈಲು ಪ್ರಯಾಣಿಕರಿಗಾಗಿ ವಿಶೇಷ ಕಾನೂನು ಅರಿವು ಮತ್ತು ಜಾಗೃತಿ ಅಭಿಯಾನವನ್ನು ನಡೆಸಲಾಯಿತು. ಅಭಿಯಾನದ ವೇಳೆ ರೈಲು ನಿಲ್ದಾಣ ಹಾಗೂ ಅದರ ಸುತ್ತಮುತ್ತಲಿನ ಪರಿಸರದಲ್ಲಿ ಪರಿಶೀಲನೆ ನಡೆಸಿದ ಪೊಲೀಸ್ ಅಧಿಕಾರಿಗಳು, ಗಾಂಜಾ ಮಾರಾಟ ಮತ್ತು ಮಾದಕ ವಸ್ತುಗಳ ಸೇವನೆಯಿಂದಾಗುವ ಅನಾಹುತಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಅಪರಾಧಗಳ ತಡೆ: ರೈಲು ಪ್ರಯಾಣದ ಸಂದರ್ಭದಲ್ಲಿ ಸರಗಳ್ಳತನ…